Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ





ಬಳ್ಳಾರಿ,ನ.1೦

ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿವಾರು ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ತಾತ್ಕಾಲಿಕ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಸಂಡೂರು ತಾಲ್ಲೂಕಿನ ಗೊಲ್ಲಲಿಂಗಮ್ಮನ ಹಳ್ಳಿ ಗ್ರಾಪಂ- 01, ಕಂಪ್ಲಿ ತಾಲ್ಲೂಕಿನ ನಂ.10 ಮುದ್ದಾಪುರ ಗ್ರಾಪಂ- 01, ಸಿರುಗುಪ್ಪ ತಾಲ್ಲೂಕಿನ ಹಚ್ಚೋಳ್ಳಿ, ಕೆಂಚನಗುಡ್ಡ ಗ್ರಾಪಂ- 02 ಸೇರಿ ಒಟ್ಟು 04 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿಯಿದ್ದು, ಆಯಾ ತಾಲ್ಲೂಕಿನ ತಾಪಂ ಕಾರ್ಯ ನಿರ್ವಹಣಾ ಅಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ನಿಯಮಾನುಸಾರ ನೇಮಕ ಮಾಡಲಾಗುವುದು.

ಈ ಹುದ್ದೆಗಳಿಗೆ ಮಾಸಿಕ ಗೌರವಧನ ರೂ.10,000 ಇರುತ್ತದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ವಿಕಲಚೇತನರು (ಕರ್ತವ್ಯ ನಿರ್ವಹಿಸಲು ಸಮರ್ಥರಿರುವವರು) ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಆಯಾ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 26 ಕೊನೆಯ ದಿನ.

*ಅರ್ಹತೆ:*

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸ್ಥಳಿಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು (ಸ್ಥಳಿಯರಾಗಿರಬೇಕು). ವಯೋಮಿತಿ 18-45 ವರ್ಷದ ಆರೋಗ್ಯವಂತರಾಗಿರಬೇಕು. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಿಕಲಚೇತನರ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಅಂಗವಿಕಲರಾಗಿರಬೇಕು, ಭಾಗಶ: ಅಂಧರು, ಭಾಗಶ:ಶ್ರವಣ ದೋಷವುಳ್ಳವರು, (ಮೈಲ್ಡ್ ಮತ್ತು ಮಾಡರೇಟ್) ಹಾಗೂ ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸುವುದು.

ಮೂರು ರೀತಿಯ ಅಂಗವಿಕಲರಿಗೆ ಸಮಾನವಾಗಿ ಆಯ್ಕೆ ಮಾಡಬೇಕು ಒಂದು ವರ್ಗದ ಅಂಗ ವಿಕಲರಿಗೆ ಆಯ್ಕೆಗೆ ಲಭ್ಯವಿಲ್ಲದಿದ್ದಲ್ಲಿ ಇನ್ನೊಂದು ವರ್ಗದಲ್ಲಿರುವ ಅಂಗವಿಕಲ ಅಭ್ಯರ್ಥಿ ಆಯ್ಕೆ ಮಾಡಲು ಕ್ರಮ ಕೈಗೊಳ್ಳಬೇಕು. ಮಹಿಳೆಯರಿಗೆ ಮೊದಲ ಆದ್ಯತೆ ನೀಡಬೇಕು. ಅಂಗವಿಕಲರಿಗೆ ಶೇ.40 ಕ್ಕಿಂತ ಮೇಲ್ಪಟ್ಟಿರಬೇಕು. ಅಂಗವಿಕಲರ ಬಗ್ಗೆ ವೈದ್ಯಕೀಯ ಮಂಡಳಿ ಪ್ರಮಾಣ ಪತ್ರ (ಗುರುತಿನ ಚೀಟಿ ಯುಡಿಐಡಿ ಕಾರ್ಡ್) ಹೊಂದಿರಬೇಕು.

ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಧೃಡರಾಗಿರಬೇಕು. ಗೌರವಧನ ಅವಧಿ ಮುಂದುವರಿಸುವ ಬಗ್ಗೆ ಒಂದು ವರ್ಷದ ನಂತರ ಅವರ ಕಾರ್ಯ ವೈಖರಿಗೊಳಪಟ್ಟಿದ್ದು ಮುಂದುವರಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಆಯ್ಕೆ ಮಾಡುವಾಗ ಸರ್ಕಾರ ನಿಗದಿಪಡಿಸಿರುವ ಕರ್ತವ್ಯಗಳನ್ನು ನಿರ್ವಹಿಸಲು “ಸಮರ್ಥಕ” ಎಂಬ ಬಗ್ಗೆ ಪರಿಶೀಲಿಸಿ ಆಯ್ಕೆ ಮಾಡುವುದು. ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರು ಕೆಲಸದಿಂದ ತೆಗೆದು ಹಾಕ ಬಹುದಾಗಿ/ಬಿಡುಗಡೆ ಮಾಡಬಹುದಾಗಿದೆ. ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸುವAತೆ ಕೋರಲು ಅವಕಾಶವಿಲ್ಲ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಎಂಆರ್‌ಡಬ್ಲೂö್ಯ ಗಳಾದ ಸಂಡೂರು (ಕರಿಬಸಜ್ಜ) ಮೊ.9632052270, ಕಂಪ್ಲಿ/ಬಳ್ಳಾರಿ (ರಾಣಿ)ಮೊ.8880875620, ಸಿರುಗುಪ್ಪ (ಸಾಬೇಶ) ಮೊ.9743509698, ಜಿಲ್ಲಾ ಸಂಯೋಜಕ (ಕೆ.ಟೇಕರಾಜ್) ಮೊ.9481320119 ಮತ್ತು ನಗರದ ಕಂಟೋನ್ ಮೆಂಟ್ ಪ್ರದೇಶದ ಶಾಂತಿಧಾಮ ಆವರಣದ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಥವಾ ಕಚೇರಿ ದೂ.08392267886 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು