Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ: ಶೇ. 99.78 ರಷ್ಟು ಎಸ್‌ಐಆರ್ ಗಣತಿ ನಮೂನೆಗಳ ವಿತರಣೆ

ಬಳ್ಳಾರಿ,ಜು.16
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಗಣತಿ ನಮೂನೆಗಳನ್ನು ಮುದ್ರಿಸಿ ಮನೆ-ಮನೆ ಭೇಟಿ ನೀಡಿ ವಿತರಿಸುವ ಹಾಗೂ ಗಣಕೀಕರಣಗೊಳಿಸುವ ಕಾರ್ಯವು ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಚುರುಕಿನಿಂದ ಸಾಗುತ್ತಿದೆ.
ಈ ಕ್ಷೇತ್ರದಲ್ಲಿ ಒಟ್ಟು 2,51,325 ಮತದಾರರಿದ್ದು, ಮುದ್ರಿಸಲಾದ ಒಟ್ಟು ಎಸ್‌ಐಆರ್ ಗಣತಿ ನಮೂನೆಗಳ ಪೈಕಿ 2,50,761 (ಶೇ. 99.78 ರಷ್ಟು) ಗಣತಿ ನಮೂನೆಗಳನ್ನು ಈಗಾಗಲೇ ಯಶಸ್ವಿಯಾಗಿ ವಿತರಿಸಲಾಗಿದೆ. ಕ್ಷೇತ್ರದ ಒಟ್ಟು ಶೇ. 97.21 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ.
ವಿತರಿಸಲಾದ ನಮೂನೆಗಳ ಪೈಕಿ 1,00,294 (ಶೇ. 39.91 ರಷ್ಟು) ನಮೂನೆಗಳ ಗಣಕೀಕರಣ ಕಾರ್ಯ ಮುಕ್ತಾಯಗೊಂಡಿದೆ. ಇದರಲ್ಲಿ ಆನ್‌ಲೈನ್ ಮೂಲಕ ಮತದಾರರಿಂದ ಸ್ವೀಕೃತವಾದ 432 ನಮೂನೆಗಳೂ ಸೇರಿವೆ.
ಕ್ಷೇತ್ರದಾದ್ಯಂತ ವಿವಿಧ ಕಾರಣಗಳಿಂದಾಗಿ ಒಟ್ಟು 4,673 ಗಣತಿ ನಮೂನೆಗಳನ್ನು ಸಂಗ್ರಹಿಸಲು ಸಾಧ್ಯವಾಗಿಲ್ಲ. ಅದರಲ್ಲಿ 2,329 ಮಂದಿ ಮರಣ ಹೊಂದಿದ ಮತದಾರರು, 1,850 ಮಂದಿ ಶಾಶ್ವತ ವಲಸೆ ಹೋದವರು, 463 ಮಂದಿ ಈಗಾಗಲೇ ಹೆಸರು ನೋಂದಾಯಿತರಾದವರು, 23 ಮಂದಿ ಪತ್ತೆಯಾಗದ/ ಗೈರು ಹಾಜರಾದವರು ಮತ್ತು 08 ಮಂದಿ ಇತರರು ಒಳಗೊಂಡಿದ್ದಾರೆ.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮನೆ-ಮನೆ ಭೇಟಿ ನೀಡಿ ಗಣತಿ ನಮೂನೆ ವಿತರಿಸುವ ಕಾರ್ಯ ಮತ್ತು ಪರಿಶೀಲಿಸುವ ಪ್ರಕ್ರಿಯೆ ಜುಲೈ 29 ರ ವರೆಗೆ ನಡೆಯಲಿದೆ. ಹಾಗಾಗಿ ಅರ್ಹ ಮತದಾರರು ತಮ್ಮ ಮಾಹಿತಿಯನ್ನು ಸಂಬAಧಿಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ ನೀಡಿ ಸಹಕರಿಸಬೇಕು ಎಂದು 93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತರಾದ ರಾಜೇಶ್ ಹೆಚ್.ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ