Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಮಟ್ಟದ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಅರ್ಜಿ ಆಹ್ವಾನ

ಬಳ್ಳಾರಿ,ಮೇ 23
ನೈಜ ಚರ್ಮ ಕುಶಲಕರ್ಮಿಗಳಲ್ಲಿನ ಕರಕುಶಲತೆ, ಪಾದರಕ್ಷೆ ತಯಾರಿಕೆಯ ನೈಪುಣ್ಯತೆ, ಸೃಜನಶೀಲತೆ ಮತ್ತು ತಾಂತ್ರಿಕ ಕೌಶಲ್ಯಗಳನ್ನು ಗುರುತಿಸಿ ಉತ್ತೇಜಿಸಲು ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತ (ಲಿಡಕರ್) ವತಿಯಿಂದ ರಾಜ್ಯಮಟ್ಟದ ಸ್ಥಳದಲ್ಲೇ ಪಾದರಕ್ಷಾ ತಯಾರಿಕಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಸ್ಪರ್ಧೆಯು ಜೂನ್ 06 ರಂದು ಬೆಳಿಗ್ಗೆ 11 ರಿಂದ ಸಂಜೆ 05 ಗಂಟೆಯವರೆಗೆ ಬೆಂಗಳೂರಿನ ಕೆಂಗೇರಿಯ ಉಲ್ಲಾಳ ಉಪನಗರದ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ, ಇಲ್ಲಿ ನಡೆಯಲಿದೆ. ಚರ್ಮ ಕುಶಲಕರ್ಮಿಗಳು ತಮ್ಮ ಅದ್ಭುತ ಪ್ರತಿಭೆಯನ್ನು ಪ್ರದರ್ಶಿಸಲು ಇದು ಅತ್ಯುತ್ತಮ ವೇದಿಕೆಯಾಗಿದೆ.
*ಆಕರ್ಷಕ ನಗದು ಬಹುಮಾನಗಳು:*
ಪ್ರಥಮ ಬಹುಮಾನ-ರೂ.50 ಸಾವಿರ, ದ್ವಿತೀಯ ಬಹುಮಾನ-ರೂ.30 ಸಾವಿರ, ತೃತೀಯ ಬಹುಮಾನ- ರೂ.20 ಸಾವಿರ ಹಾಗೂ ಸಮಾಧಾನಕರ ಬಹುಮಾನ (ಇಬ್ಬರಿಗೆ)- ತಲಾ ರೂ.10 ಸಾವಿರ.
*ಅರ್ಹತೆಗಳು ಮತ್ತು ನಿಯಮಗಳು:*
ಸ್ಪರ್ಧಾಳುಗಳು 18 ರಿಂದ 55 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿಗೆ ಸೇರಿದ (ಆರುಂಧತಿಯಾರ್, ಚಮ್ಮಾದಿಯಾ, ಚಮಾರ್, ಚಂಬಾರ್, ಚಮಗಾರ್, ದಕ್ಕಲ್, ದಕ್ಕಲ್‌ವಾರ್, ದಕ್ಕಲಿಗ, ಮಾದರ್, ಮಾದಿಗ್, ಮಾದಿಗ, ಮಿನಿಮಾದಿಗ್, ಜಾಂಬುವುಲು, ಹರಳಯ್ಯ, ಮಾಚಿಗಾರ್, ಮೋಚಿಗಾರ್, ಮೋಚಿ, ಮುಚಿ, ತೆಲುಗು ಮೋಚಿ, ಕಮಾಟಿ ಮೋಚಿ, ರೋಹಿದಾಸ್, ಧೋರ್, ಕಕ್ಕಯ್ಯ, ಕಂಕಯ್ಯ, ಸಮಗಾರ, ಸಮಗಾರ್) ಚರ್ಮ ಕುಶಲಕರ್ಮಿಗಳಾಗಿರಬೇಕು ಅಥವಾ ಅವರ ಕುಟುಂಬದವರಾಗಿರಬೇಕು.
ಪುರುಷ ಅಥವಾ ಮಹಿಳೆಯರ ಒಂದು ಜೊತೆ ಪಾದರಕ್ಷೆಯನ್ನು ಮಾತ್ರ ತಯಾರಿಸಬೇಕು. ಪಾದರಕ್ಷೆ ತಯಾರಿಸಲು ಬೇಕಾಗುವ ಕಚ್ಚಾವಸ್ತು ಹಾಗೂ ಅಗತ್ಯ ಪರಿಕರಗಳನ್ನು ಸ್ಪರ್ಧಾಳುಗಳೇ ಸ್ವತಃ ತರಬೇಕು. ಕೊಲ್ಹಾಪುರಿ ಮಾದರಿಯ ಪಾದರಕ್ಷೆಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
ಸ್ಪರ್ಧಾಳುಗಳಿಗೆ ಅಂದು ಊಟದ ವ್ಯವಸ್ಥೆ ಮಾಡಲಾಗುವುದು. ಸ್ಪರ್ಧಾಳುಗಳು ಸ್ವಂತ ಖರ್ಚಿನಲ್ಲಿ ಬರಬೇಕಾಗಿದ್ದು, ಸೂಕ್ತ ದಾಖಲಾತಿಗಳನ್ನು ಒದಗಿಸಿದಲ್ಲಿ ನಿಯಮಾನುಸಾರ ಪ್ರಯಾಣ ಭತ್ಯೆ ಮತ್ತು ದಿನಭತ್ಯೆ ನೀಡಲಾಗುವುದು.
*ಸಲ್ಲಿಸಬೇಕಾದ ಅಗತ್ಯ ದಾಖಲೆಗಳು:*
ಜಾತಿ ಪ್ರಮಾಣ ಪತ್ರ, ವೃತ್ತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ನಿಗಮದಿಂದ ತರಬೇತಿ ಪಡೆದ ದಾಖಲೆ ಅಥವಾ ಇ-ಶ್ರಮ್ ಕಾರ್ಡ್.
ಅರ್ಜಿ ನಮೂನೆಗಳನ್ನು ನಿಗಮದ ಅಧಿಕೃತ ವೆಬ್‌ಸೈಟ್ https://lidkar.com ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 30 ರೊಳಗೆ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ತಲುಪಿಸಬೇಕು.
*ಅರ್ಜಿ ಸಲ್ಲಿಸಬೇಕಾದ ವಿಳಾಸ:*
ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತ, ಕೇಂದ್ರ ಕಚೇರಿ, ಡಾ.ಬಾಬು ಜಗಜೀವನ ರಾಂ ಲಿಡಕರ್ ಭವನ, ಮಿಲ್ರ್ಸ್ ಟ್ಯಾಂಕ್ ಬಂಡ ಏರಿಯಾ, ವಸಂತ ನಗರ, ಬೆಂಗಳೂರು - 560052.
ಹೆಚ್ಚಿನ ಮಾಹಿತಿಗಾಗಿ ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಹತ್ತಿರದ ಬುಡಾ ಕಾಂಪ್ಲೆಕ್ಸ್ ನ ಮಳಿಗೆ 24 ರ ಲಿಡ್ಕರ್ ಲೆದರ್ ಎಂಪೋರಿಯA ಕಚೇರಿ ಅಥವಾ ಮೊ.8660667128 ಗೆ ಸಂಪರ್ಕಿಸಬಹುದಾಗಿದೆ ಎಂದು ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತ (ಲಿಡಕರ್)ದ ಜಿಲ್ಲಾ ಸಂಯೋಜಕ ಟಿ.ಸಂಜೀವಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ