Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ಉಪನ್ಯಾಸ ಸರಣಿ ವಿದ್ಯಾರ್ಥಿಗಳು ಜ್ಞಾನ ವೃದ್ಧಿಸಿಕೊಳ್ಳಿ: ಪ್ರೊ.ಜಿ.ಪಿ ದಿನೇಶ್






ಬಳ್ಳಾರಿ,ನ.29

ಶೈಕ್ಷಣಿಕ ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಉಪನ್ಯಾಸಗಳಲ್ಲಿ ಭಾಗವಹಿಸುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾದ ಪ್ರೊ.ಜಿ.ಪಿ ದಿನೇಶ್ ಅವರು ಹೇಳಿದರು.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತç ವಿಭಾಗದಲ್ಲಿ ‘ರಾಸಾಯನಿಕ ವಿಜ್ಞಾನದ ಇತ್ತೀಚಿನ ಪ್ರವೃತ್ತಿಗಳ ಕುರಿತು ಎರಡು ದಿನಗಳ ಹಳೆಯ ವಿದ್ಯಾರ್ಥಿಗಳ ಉಪನ್ಯಾಸ ಸರಣಿಗಳು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಉಪನ್ಯಾಸ ಸರಣಿಗಳಿಂದ ಸಮಗ್ರ ವಾತಾವರಣವನ್ನು ಒದಗಿಸಿಕೊಳ್ಳಬಹುದು. ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಪ್ರಸ್ತುತ ವಿದ್ಯಾರ್ಥಿ ಹಾಗೂ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಿದಂತಾಗುತ್ತದೆ. ಸಮಾಜಕ್ಕೆ ಶೈಕ್ಷಣಿಕ ಸೇವೆಯನ್ನು ಒದಗಿಸುವ ಮೂಲಕ ಜವಾಬ್ದಾರಿಯುತ ಸ್ಥಾನ ಪಡೆಯಬಹುದು ಎಂದು ಮಾತನಾಡಿದರು.

ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಎಮ್ ಸಾಲಿ ಮಾತನಾಡಿ, ಹಳೆಯ ವಿದ್ಯಾರ್ಥಿಗಳ ಸಂಘವು ವಿದ್ಯಾರ್ಥಿ ಮತ್ತು ಶಿಕ್ಷಣ ಸಂಸ್ಥೆಯ ನಡುವೆ ಬಲವಾದ ಬಾಂಧವ್ಯ ಸ್ಥಾಪಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಿಗೆ ವಿಚಾರ ವಿನಿಮಯಕ್ಕಾಗಿ ಸೂಕ್ವವಾದ ವೇಧಿಕೆ ಒದಗಿಸಿದಂತಾಗುತ್ತದೆ. ಶೈಕ್ಷಣಿಕ ಪ್ರಗತಿಯ ಜೊತೆಗೆ ದೇಶವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶುದ್ಧ ವಿಜ್ಞಾನ ವಿಭಾಗದ ಡೀನ್ ಪ್ರೊ.ಖಡ್ಕೆ ಉದಯ ಕುಮಾರ್, ಕಾರ್ಯಕ್ರಮ ಸಂಚಾಲಕರಾದ ಪ್ರೊ.ಕೆ.ಎಸ್ ಲೋಕೇಶ್, ಸಹ ಸಂಚಾಲಕ ಡಾ.ಸಾದು ಸೂರ್ಯಕಾಂತ ಎಸ್., ಪ್ರೊ.ಅರುಣ್‌ಕುಮಾರ ಲಗಶೆಟ್ಟಿ ಉಪಸ್ಥಿತರಿದ್ದರು.

ಎರಡು ದಿನಗಳ ಹಳೆಯ ವಿದ್ಯಾರ್ಥಿಗಳ ಉಪನ್ಯಾಸ ಸರಣಿಯಲ್ಲಿ ವಿಭಾಗದ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ