Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಬಹುತೇಕ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಗೆಲುವು ಖಚಿತ ಇನ್ನೂಳಿದ ಎರಡು ಸುತ್ತಿನ ಮತಎಣಿಕೆ

ಬಳ್ಳಾರಿ, ನವೆಂಬರ್ 23: ಸಂಡೂರು ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ ನಡೆಯುತ್ತಿದೆ. ಉಪ ಚುನಾವಣಾ ಕಣದಲ್ಲಿ 6 ಅಭ್ಯರ್ಥಿಗಳಿದ್ದು ಸದ್ಯದ ಮಾಹಿತಿಯಂತೆ ಕಾಂಗ್ರೆಸ್‌ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಬಂಗಾರ ಹನುಮಂತ ಮತ್ತು ಕಾಂಗ್ರೆಸ್‌ನ ಇ. ಅನ್ನಪೂರ್ಣ. ಸಂಡೂರು ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.

ಶನಿವಾರ ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ. ಸಮಯ 10.17ರ ಮಾಹಿತಿಯಂತೆ ಕಾಂಗ್ರೆಸ್‌ನ ಇ. ಅನ್ನಪೂರ್ಣ 38,373 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ಬಂಗಾರ ಹನುಮಂತ 38,340 ಮತಗಳನ್ನು ಪಡೆದ್ದಾರೆ.

ಸಂಡೂರು ಕ್ಷೇತ್ರದಲ್ಲಿ ನವೆಂಬರ್ 13ರಂದು 253 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಶೇ 76.24 ರಷ್ಟು ಮತದಾನವಾಗಿತ್ತು. ಅಂಚೆ ಮತಗಳ ಎಣಿಕೆಯಿಂದಲೂ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದರು.

ಇಗಾಗಲೆ 17ನೇ ಸುತ್ತಿನ ಮತ ಏಣಿಕೆ ಮುಕ್ತಾಯ ಗೋಂಡಿದ್ದು
ಕಾಂಗ್ರೇಸ್ ಮುನ್ನಡೆ ಕಾಯ್ದುಕೋಂಡು ಬಂದಿದೆ
ಇ. ತುಕಾರಾಂ ಸಂಡೂರು ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಾಯಕರ ಬಳಿ ಉಪ ಚುನಾವಣೆಗೆ ಪತ್ನಿಗೆ ಟಿಕೆಟ್ ಕೊಡಿಸುವಲ್ಲಿ ಅವರು ಸಫಲವಾಗಿದ್ದಾರೆ. ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಅವರೇ ತೆಗೆದುಕೊಂಡಿದ್ದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ತಂತ್ರ ರೂಪಿಸಿ ಪ್ರಚಾರವನ್ನು ನಡೆಸಿದ್ದಾರೆ. ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ಸಂಡೂರು ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದ್ದರಿಂದ ಸಂಡೂರು ಕದನ ಕುತೂಹಲಕ್ಕೆ ಕಾರಣವಾಗಿದೆ. ಇವಿಎಂ ಮತಗಳ ಎಣಿಕೆ ಕಾರ್ಯ ನಡೆಯುತ್ತಿದ್ದು, 6 ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಬಿಜೆಪಿಯ ಬಂಗಾರ ಹನುಮಂತ ಪರವಾಗಿ ಬಿ. ಶ್ರೀರಾಮುಲು, ಜನಾರ್ದನ ರೆಡ್ಡಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮತ ಎಣಿಕೆ ನಡೆಯುತ್ತಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ.

16ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 8881 ಮತಗಳ ಮುನ್ನಡೆ   ಕಾಂಗ್ರೇಸ್- 83368   ಬಿಜೆಪಿ- 74487

ಸಂಡೂರು ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತಗಳು? * ಕಾಂಗ್ರೆಸ್‌ನ ಇ. ಅನ್ನಪೂರ್ಣ - 50692 * ಬಿಜೆಪಿಯ ಬಂಗಾರ ಹನುಮಂತ - 47204 * ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ - 298 * ಪಕ್ಷೇತರ ಎನ್. ವೆಂಕಣ್ಣ - 219 * ಪಕ್ಷೇತರ ಟಿ. ಎರ್ರಿಸ್ವಾಮಿ - 117 * ಪ್ಷೇತರ ಟಿ. ಎಂ. ಮಾರುತಿ - 106 ಮತಗಳು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ