Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿ ಮಹಿಳೆಯರಿಗಾಗಿ 10 ದಿನಗಳ ಉಚಿತ ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ


ಬಳ್ಳಾರಿ,ಜು.30
ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತರಿರುವ ಮಹಿಳೆಯರಿಗಾಗಿ 'ಸಿಡಾಕ್' ವತಿಯಿಂದ ನಗರದಲ್ಲಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ತರಬೇತಿ ಅವಧಿಯಲ್ಲಿ ಮಹಿಳಾ ಉದ್ಯಮಿಗಳಿಗೆ ಅಗತ್ಯವಿರುವ ಹಲವು ವಿಷಯಗಳ ಕುರಿತು ಅನುಭವಿ ತಜ್ಞರಿಂದ ಉಪನ್ಯಾಸ ಮತ್ತು ಮಾಹಿತಿ ನೀಡಲಾಗುವುದು. ಸ್ವಯಂ ಉದ್ಯಮ ಆಯ್ಕೆ ಮಾಡುವ ವಿಧಾನ, ಯಶಸ್ವಿ ಉದ್ಯಮಿಯ ಲಕ್ಷಣಗಳು, ನಾಯಕತ್ವ ಗುಣಗಳು, ಉದ್ಯಮ ಪ್ರಾರಂಭಿಸುವ ವಿವಿಧ ಹಂತಗಳು ಹಾಗೂ ವ್ಯಾಪಾರೋದ್ಯಮದ ಅವಕಾಶಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.
ಇದರೊಂದಿಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರ ಹಾಗೂ ಸಾಲ ಸೌಲಭ್ಯಗಳು, ಹಣಕಾಸು ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ ಮತ್ತು ಯೋಜನೆ ವರದಿ ತಯಾರಿಸುವ ಕುರಿತು ಸವಿಸ್ತಾರವಾಗಿ ತಿಳಿಸಿಕೊಡಲಾಗುವುದು. ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಹಂತದಲ್ಲೂ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಅಲ್ಲದೆ, ಈಗಾಗಲೇ ತರಬೇತಿ ಪಡೆದು ಯಶಸ್ವಿಯಾಗಿ ಉದ್ಯಮ ನಡೆಸುತ್ತಿರುವ ಉದ್ಯಮಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
*ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿವರ:*
18 ರಿಂದ 50 ವರ್ಷಗಳೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ‘ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ’ ಕಚೇರಿಯನ್ನು ಖುದ್ದಾಗಿ ಅಥವಾ ಮೊ.7483538942 / 9449226221 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ