Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಗಸ್ಟ್ 15ರಿಂದ ಕೊಪ್ಪಳದಲ್ಲಿ 10ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ

----
ಕೊಪ್ಪಳ ಜುಲೈ 31ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಹಾಗೂ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ತೋಟಗಾರಿಕೆ ಇಲಾಖೆ ವತಿಯಿಂದ 2026-27ನೇ ಸಾಲಿನ 10ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ-2026 ಅನ್ನು ಆಗಸ್ಟ್ 15 ರಿಂದ 20ರವರೆಗೆ ಆರು ದಿನಗಳ ಕಾಲ ಜಿಲ್ಲಾ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.
ಅಭಿಯಾನದ ಅಂಗವಾಗಿ ರೈತರು ಹಾಗೂ ಸಾರ್ವಜನಿಕರಿಗೆ ಒಣ ತೋಟಗಾರಿಕೆ ಬೇಸಾಯ, ಬರ ನಿರ್ವಹಣೆ, ಹೊಸ ತಂತ್ರಜ್ಞಾನಗಳು, ನೂತನ ತಳಿಗಳ ಪರಿಚಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತದೆ. ಅಲ್ಲದೆ, ಮಾವು, ತೆಂಗು, ಪೇರಲ, ಚಿಕ್ಕು, ಅಂಜೂರ, ಕರಿಬೇವು, ನುಗ್ಗೆ, ದ್ರಾಕ್ಷಿ ಸೇರಿದಂತೆ ವಿವಿಧ ಹಣ್ಣಿನ ಕಸಿ ಸಸಿಗಳು, ಅಲಂಕಾರಿಕ, ಹೂವಿನ, ತರಕಾರಿ, ಔಷಧೀಯ ಹಾಗೂ ಸಾಂಬಾರು ಸಸ್ಯಗಳನ್ನು ಇಲಾಖೆಯ ನಿಗದಿತ ದರದಲ್ಲಿ ಮಾರಾಟ ಮಾಡಲಾಗುತ್ತದೆ.
ಈ ಬಾರಿಯ ಸಸ್ಯಸಂತೆಯ ವಿಶೇಷ ಆಕರ್ಷಣೆಯಾಗಿ ಜಗತ್ತಿನ ದುಬಾರಿ ಮಿಯಾಜಾಕಿ ಮಾವಿನ ಕಸಿ ಸಸಿಗಳು ಹಾಗೂ ಮೆಕಡೋನಿಯಾ (Macadamia) ನಟ್ ಕಸಿ ಸಸಿಗಳು ಸೇರಿದಂತೆ ದೇಶಿ-ವಿದೇಶಿ ಅಪರೂಪದ ಹಣ್ಣಿನ ಮತ್ತು ಹೂವಿನ ಸಸಿಗಳನ್ನೂ ಲಭ್ಯವಾಗುವಂತೆ ಮಾಡಲಾಗಿದೆ.
ಅಭಿಯಾನದಲ್ಲಿ ಸಮಗ್ರ ಖುಷ್ಕಿ ತೋಟಗಾರಿಕೆ, ಅಪ್ರಧಾನ ಹಾಗೂ ವಿದೇಶಿ ಹಣ್ಣುಗಳ ಕೃಷಿ, ಸಮುದಾಯ ತೋಟಗಾರಿಕೆ, ಬಾಳೆ ಮತ್ತು ಹಲಸು ಬೆಳೆಗಳ ಒಪ್ಪಂದ ಕೃಷಿ, ಬ್ಯಾಂಕ್ ಸಾಲ ಸೌಲಭ್ಯ, ಬೆಳೆ ವಿಮೆ, ಸಾವಯವ ಕೃಷಿ ಹಾಗೂ ಸಾವಯವ ಪ್ರಮಾಣೀಕರಣ ಕುರಿತು ಮಾಹಿತಿ ನೀಡಲಾಗುತ್ತದೆ.
ಇದರ ಜೊತೆಗೆ ಇಲಾಖೆಯ ವಿವಿಧ ಯೋಜನೆಗಳು, ಗುಣಮಟ್ಟದ ಸಸಿಗಳು, ಎರೆಹುಳು ಗೊಬ್ಬರ, ಜೈವಿಕ ಗೊಬ್ಬರ, ಹನಿ ನೀರಾವರಿ, ಇಸ್ರೇಲ್ ಮಾದರಿಯ ತಂತ್ರಜ್ಞಾನ, ಜೇನು ಸಾಕಾಣಿಕೆ, ಅಣಬೆ ಬೇಸಾಯ, ಮೌಲ್ಯವರ್ಧನೆ, ಕೈತೋಟ, ತಾರಸಿ ತೋಟ, ವರ್ಟಿಕಲ್ ತೋಟ, ತೋಟಗಾರಿಕೆ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಕೃಷ್ಣ ಸಿ. ಉಕ್ಕುಂದ ಅವರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಇಲಾಖೆ, ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾ.ವ.), ಕೊಪ್ಪಳ ಅವರನ್ನು 9483284926 ಹಾಗೂ 8660412770 ಸಂಖ್ಯೆಗಳ ಮೂಲಕ ಅಥವಾ ಸಂಬಂಧಿಸಿದ ತಾಲ್ಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ