Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಿವಾನ್ ಎ ಮಸ್ತಾನ್ ದರ್ಗಾ(ಸುನ್ನಿ) ವಕ್ಫ್ ಸಂಸ್ಥೆಯ ಕಾರ್ಯಾಕಾರಿ ಸಮಿತಿಗೆ ಚುನಾವಣೆ





ಬಳ್ಳಾರಿ,ನ.04

ಸಿರುಗುಪ್ಪ ಪಟ್ಟಣದ ವಕ್ಫ್ ಸಂಸ್ಥೆಯಾದ ಕೌಲ್ ಬಜಾರ್ ವ್ಯಾಪ್ತಿಯ ವಕ್ಫ್ ಸಂಸ್ಥೆ ದಿವಾನ್ ಎ ಮಸ್ತಾನ್ ದರ್ಗಾ(ಸುನ್ನಿ)ವಕ್ಫ್ ಸಂಸ್ಥೆಗೆ ಹೊಸ ಸಮಿತಿ ರಚಿಸುವ ನಿಮಿತ್ತ ಚುನಾವಣಾ ಪ್ರಕ್ರಿಯೆಯು ನ.04 ರಿಂದ 22 ರವರೆಗೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಚುನಾವಣಾ ನಾಮಪತ್ರವನ್ನು ನ.04 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 02.30 ಗಂಟೆಯವರೆಗೆ ಬಳ್ಳಾರಿ ನಗರದ ಜಿಲ್ಲಾ ವಕ್ಫ್ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ನ.10 ರ ಮಧ್ಯಾಹ್ನ 02.30 ರೊಳಗೆ ಸಲ್ಲಿಸಬೇಕು.

ನಾಮಪತ್ರ ಪರಿಶೀಲನೆ ನ.11 ರ ಬೆಳಿಗ್ಗೆ 11.30 ರಿಂದ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನ.12 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 03 ಗಂಟೆಯ ವರೆಗೆ ಅವಕಾಶ ಇರಲಿದೆ. ಅದೇ ದಿನ ಮಧ್ಯಾಹ್ನ 03.30 ರ ನಂತರ ಚುನಾವಣಾ ಚಿನ್ಹೆಗಳನ್ನು ಹಂಚಿಕೆ ಮಾಡಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

ನ.22 ರ ಶನಿವಾರ ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಕೌಲ್ ಬಜಾರ್ ದಿವಾನ್ ಎ ಮಸ್ತಾನ್ ದರ್ಗಾ(ಸುನ್ನಿ)ವಕ್ಫ್ ಸಂಸ್ಥೆಗೆ ಚುನಾವಣೆ ನಡೆಸಿ, ಅದೇ ದಿನ ಸಂಜೆ 04 ಗಂಟೆಯಿ0ದ ಮತ ಎಣಿಕೆ ನಡೆಸಲಾಗುವುದು ಎಂದು ಕೌಲ್ ಬಜಾರ್ ನ ದೀವಾನ್ ಎ ಮಸ್ತಾನ ದರ್ಗಾ(ಸುನ್ನಿ) ಚುನಾವಣಾಧಿಕಾರಿ ಆದ ಕಲಬುರುಗಿ ವಿಭಾಗೀಯ ವಕ್ಫ್ ಅಧಿಕಾರಿ ನೂರ್ ಪಾಷಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ