ಬಳ್ಳಾರಿ,ನ.10
ಪ್ರಸ್ತಕ ಸಾಲಿಗೆ ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ತುಂಗಾಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳಿಗೆ ಒದಗಿಸುವ ಕುರಿತು ಚರ್ಚಿಸಲು ನ.14 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3 ನೇ ಮಹಡಿಯ ಕೊಠಡಿ ಸಂಖ್ಯೆ 334 ರ ಸಮ್ಮೇಳನ ಸಭಾಂಗಣದಲ್ಲಿ 125 ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ.
ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಇಲಾಖೆ ಹಾಗೂ ಬೆಂಗಳೂರು ನಗರಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆದ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಭೆಗೆ ಸಂಬ೦ಧಿಸಿದ ಸಚಿವರು, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರು, ರೈತ ಮುಖಂಡರು ಭಾಗವಹಿಸಿ ತಮ್ಮ ಸಲಹೆ ಸೂಚನೆ ನೀಡಬಹುದು ಎಂದು ತುಂಗಾಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಆದ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

