Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಕ್ಷೇತ್ರದ ಆರು ಸಾಧಕರಿಗೆ ೨೦೨೪ ನೇ ಸಾಲಿನ “ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ”

ಹಾಸನ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.), ಬೆಂಗಳೂರು ವತಿಯಿಂದ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯ ಸನ್ನಿಧಿಯಲ್ಲಿ ಹಮ್ಮಿಕೊಂಡಿರುವ ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರದ ಆರು ಸಾಧಕರಿಗೆ ೨೦೨೪ ನೇ ಸಾಲಿನ “ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟ್ರಸ್ಟಿಗಳಾದ ನಾಗರಾಜ್ ದೊಡ್ಡಮನಿ, ಎಚ್.ಎಸ್.ಬಸವರಾಜ್, ವಾಸು ಸಮುದ್ರವಳ್ಳಿ, ಡಾ. ಪಿ. ದಿವಾಕರ ನಾರಾಯಣ, ದೇಸು ಆಲೂರು, ಡಾ. ಎಚ್. ಕೆ. ಹಸೀನಾ, ಲತಾಮಣಿ ಎಂ. ಕೆ. ತುರುವೇಕೆರೆ ಮುಂತಾದವರನ್ನೊಳಗೊಂಡ ಆಯ್ಕೆ ಸಮಿತಿಯು ಎನ್. ಶೈಲಜಾ ಹಾಸನ (ಸಾಹಿತ್ಯ ಕ್ಷೇತ್ರ), ಸೈಯದ್ ಮುಹೀಬುಲ್ಲಾ ಖಾದ್ರಿ (ಪಾರಂಪರಿಕ ವೈದ್ಯಕೀಯ ಕ್ಷೇತ್ರ), ಮಹೇಶ್ ಎನ್. (ಮಾಧ್ಯಮ ಕ್ಷೇತ್ರ), ಚಂದ್ರಪ್ಪ ಕೆ.ಆರ್. (ಮುದ್ರಣ ಕ್ಷೇತ್ರ), ಸಿದ್ದೇಶ್ ಕುಮಾರ್ ವೈ.ಟಿ. (ಸಂಗೀತ ಕ್ಷೇತ್ರ) ಹಾಗೂ ವೈ. ಎಸ್. ರಮೇಶ್ (ಸಂಘಟನಾ ಕ್ಷೇತ್ರ) ಆರು ಸಾಧಕರನ್ನು ಆಯ್ಕೆ ಮಾಡಲಾಗಿದೆ.

ವೇದಿಕೆಯು ಡಿಸೆಂಬರ್ ೨೯ ಭಾನುವಾರ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಹಮ್ಮಿಕೊಂಡಿರುವ ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಲ್ಬುರ್ಗಿ ಜಿಲ್ಲೆಯ ಶ್ರೀ ತೋಂಟದಾರ್ಯ ಅನುಭವ ಮಂಟಪ, ಆಳಂದ ಮಠದ ಶ್ರೀ ಕೋರಣೇಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ತುಮಕೂರಿನ ಹಿರಿಯ ಸಾಹಿತಿ ಹಾಗೂ ಹೋರಾಟಗಾರ್ತಿ ಡಾ. ಬಿ.ಸಿ.ಶೈಲಾ ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ನಾಡಿನ ವಿವಿಧ ಕ್ಷೇತ್ರಗಳ ಸಾಧಕರಿಗೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಎಚ್.ಡಿ. ರಂಗನಾಥ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಟಿ. ಸತೀಶ್ ಜವರೇಗೌಡರವರು ಶರಣ ಸಂಕುಲ ರತ್ನ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ