Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರೊಬ್ಬರಿಗೆ ಸರ್ವೇ ಮಾಡಿಕೊಡಲು 50 ಸಾವಿರ ಡಿಮ್ಯಾಂಡ್

 

ಅರುಣೋದಯ ಕ್ಯಾಂಪ್ ನಲ್ಲಿ ರೈತನಿಂದ ಲಂಚ ಪಡೆಯುತ್ತಿದ್ದ ವೇಳೆ ಸೋಮವಾರ ರಾತ್ರಿ ಸರ್ವೇಯರ್ ನನ್ನು ರೆಡ್ ಹ್ಯಾಂಡ್ ಆಗಿ ವಶಪಡಿಸಿಕೊಂಡ ಲೋಕಾಯುಕ್ತ ಪೊಲೀಸರು.

ಕಾರಟಗಿ: ತಾಲೂಕಿನ ರೈತರೊಬ್ಬರಿಗೆ ಸರ್ವೇ ಮಾಡಿಕೊಡಲು 50 ಸಾವಿರ ಡಿಮ್ಯಾಂಡ್ ಮಾಡಿದ್ದ ಲೈಸೆನ್ಸ್ ಸರ್ವೇಯರ್ ನನ್ನು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ವಶಪಡಿಸಿಕೊಂಡ ಘಟನೆ ತಾಲೂಕಿನ ಅರುಣೋದಯ ತಾಂಡಾದಲ್ಲಿ ಸೋಮವಾರ ರಾತ್ರಿ ನಡೆದಿದೆ.


ವಿಜಯ್ ಚೌಹಾಣ್ ಎನ್ನುವ ಲೈಸೆನ್ಸ್ ಸರ್ವೇಯರ್ ರೈತರೊಬ್ಬರ 6 ಎಕರೆ ಜಮೀನು ಪೋಡಿ ಮಾಡಿಕೊಡಲು ವಿನಾ ಕಾರಣ ವಿಳಂಬ ಮಾಡಿದ್ದಾರೆ. ಜತೆಗೆ ರೈತನ ಕೆಲಸ ಮಾಡಿಕೊಡಲು ಸತಾಯಿಸಿದ್ದಾರೆ ಎನ್ನಲಾಗಿದೆ. ಇದರಿಂದ ರೋಷಿ ಹೋಗಿರುವ ರೈತ ಪರಿಪರಿಯಾಗಿ ಬೇಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಆಗ ಸರ್ವೇಯರ್ ರೈತನಿಗೆ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಆಗ ರೈತ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾನೆ. ಈ ವೇಳೆ ಲಂಚ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಲೋಕಾಯುಕ್ತ ಎಸ್ ಪಿ ಸತೀಶ್ ಚಿಟುಗುಬ್ಬಿ ಹಾಗೂ ಡಿವೈ ಎಸ್ ಪಿ ವಸಂತ್ ಕುಮಾರ್ ನೇತೃತ್ವದಲ್ಲಿ ಪಿಐಗಳಾದ ಚಂದ್ರಪ್ಪ ಇ ಟಿ, ಸುನಿಲ್ ಮೆಗಾಲ್ ಮನೆ, ನಾಗರತ್ನ ಹಾಗೂ ಕಾನ್ಸ್ಟೇಬಲ್ ಗಳಾದ ಬಸವರಾಜ, ಚನ್ನವಿರ, ವೀರನಗೌಡ, ಮಂಜುನಾಥ, ಗಣೇಶ್ ಗೌಡ ಒಳಗೊಂಡ ತಂಡ ಸೋಮವಾರ ರಾತ್ರಿ ಅರುಣೋದಯ ಕ್ಯಾಂಪ್ ನ ವಿಜಯ್ ಚೌಹಾಣ್ ನಿವಾಸದಲ್ಲಿ ರೈತನಿಂದ 30 ಸಾವಿರ ರೂ. ಲಂಚ ಸ್ವೀಕರಿಸವ ವೇಳೆ ದಾಳಿ ನಡೆಸಿ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ವಶಪಡಿಸಿಕೊಂಡಿದ್ದಾರೆ. ಬಳಿಕ ಎಲ್ಲಾ ಪ್ರಕ್ರಿಯೆ ಗಳನ್ನು ಮುಗಿಸಿದ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು