Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಕೊಪ್ಪಳ ಮಾರ್ಚ್ 03: ಸಕಾಲಕ್ಕೆ ಮಾಹಿತಿ ನೀಡಿದೆ ನಿರ್ಲಕ್ಷ್ಯ ವಹಿಸಿದ ಒಬ್ಬ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ಮೂವರು ಗ್ರಾಮ ಪಂಚಾಯತ ಕಾರ್ಯದರ್ಶಿಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ. ವೆಂಕಟ ಸಿಂಗ್ ಅವರು ತಲಾ 10,000/- ಸಾವಿರ ದಂಡ ವಿಧಿಸಿ ಆದೇಶ ಮಾಡಿದ್ದಾರೆ.
ಮೇಲ್ಮನವಿದಾರರು ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡಿದೆ ಇರುವುದರಿಂದ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಲ್ಲಿ ಸಲ್ಲಿಸಿದ ದ್ವೀತಿಯ ಮೇಲ್ಮವಿ ವಿಚಾರಣೆ ನಡೆಸಿದಾಗ ಮೇಲ್ಮನವಿದಾರರಿಗೆ ಮಾಹಿತಿ ನೀಡುವಂತೆ ಪ್ರತಿವಾದಿಗಳಾದ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ ಕಾರ್ಯದರ್ಶಗಳಿಗೆ ಪೀಠ ಮಾಹಿತಿ ಹಕ್ಕು ಅಧಿನಿಯಮ 2005 ಕಲಂ 18(3) ಎ,ಡಿ ರಡಿ ನಿರ್ದೇಶನ ನೀಡಿ, ತಪ್ಪಿದಲ್ಲಿ ಮಾಹಿತಿ ಹಕ್ಕು ಅಧಿನಿಯಮ 2005ರ ಕಲಂ 20(1) ರಡಿ ದಂಡದ ಎಚ್ಚರಿಕೆ ನೀಡಿದರೂ ಪೀಠದ ಆದೇಶ ಪಾಲನೆ ಮಾಡದ ಕಾರಣ ಪ್ರತಿವಾದಿ ಅಧಿಕಾರಿಗಳಾದ ವಡಗೇರಾ ತಾಲ್ಲೂಕಿನ ತಡಬಿಡಿ ಗ್ರಾಮ ಪಂಚಾಯತ ಕಾರ್ಯದರ್ಶಿ ಯಂಕನಗೌಡ, ಗುಂಡಗುರ್ತಿ ಗ್ರಾಮ ಪಂಚಾಯತ ಕಾರ್ಯದರ್ಶಿ ಮಲ್ಲಿಕಾರ್ಜುನ ನಾಯಕ್, ಯಾದಗಿರಿ ತಾಲ್ಲೂಕಿನ ಸೈದಾಪೂರ ಗ್ರಾಮ ಪಂಚಾಯತ ಕಾರ್ಯದರ್ಶಿ ಇಸ್ಮಾಯಿಲ್, ಇವರಿಗೆ ಹಾಗೂ ವಿಜನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ತಾಡರು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ದೊಡ್ಡಮನಿ ಅವರಿಗೆ ತಲಾ 10,000/- ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಮಾಡಲಾಗಿದೆ.
ಪ್ರಕರಣದಲ್ಲಿ ಸೈದಾಪೂರ ಗ್ರಾಮ ಪಂಚಾಯತ ಕಾರ್ಯದರ್ಶಿ ಇಸ್ಮಾಯಿಲ್ ಅವರಿಗೆ ಎರಡು ಪ್ರತ್ಯೇಕ ಪ್ರಕಾರಣದಲ್ಲಿ ತಲಾ 10,000/- ಸಾವಿರ ಸೇರಿ 20,000/- ಸಾವಿರ ದಂಡ ವಿಧಿಸಿದೆ ಹಾಗೂ ಮೇಲ್ಮನವಿದಾರಿಗೆ ಮಾಹಿತಿ ನೀಡಲು ಮಾಡಿದ ವಿಳಂಬಕ್ಕಾಗಿ ಮೇಲ್ಮನವಿದಾರರಿಗೆ ರೂ.3000/- ಸಾವಿರ ಪರಿಹಾರ ನೀಡುವಂತೆ ತಡಬಿಡಿ ಗ್ರಾಮ ಪಂಚಾಯತ ಕಾರ್ಯದರ್ಶಿ ಯಂಕನಗೌಡ ಇವರಿಗೆ ಆದೇಶ ಮಾಡಲಾಗಿದೆ.
ಒಟ್ಟು ಐದು ಪ್ರಕರಣಗಳಲ್ಲಿ ಪ್ರತಿವಾದಿಯವರಿಗೆ 50,000/- ಸಾವಿರ ದಂಡ ವಿಧಿಸಿದ್ದು, ಸದರಿ ದಂಡ ಪಾವತಿ ಮಾಡಿ ಮುಂದಿನ ವಿಚಾರಣೆಗೆ ಹಾಜರಾಗಲು ಪುನಃ ಎಚ್ಚರಿಕೆ ನೀಡಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ