Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಠಾತ್ ದಾಳಿ: ಇಟ್ಟಿಗೆ ಭಟ್ಟಿ ಮಾಲೀಕರ ವಿರುದ್ಧ ಪ್ರಕರಣ ದಾಖಲು


ರಾಯಚೂರು ಜೂನ್ 6 : ದೇವದುರ್ಗ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರ ಕಾರ್ಯಾಚರಣೆ ನಡೆಸಿ, ದುಡಿಯಲು ಹೋಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಶಾಲೆಗೆ ಸೇರಿಸಿ ಯಶಸ್ವಿ ಕಾರ್ಯಚರಣೆ ಮಾಡಿ ಜನರಿಂದ ಮೆಚ್ಚುಗೆ ಗಳಿಸಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರ ತಂಡವು ಇದೀಗ ಮತ್ತೊಂದು ಕಾರ್ಯಾಚರಣೆ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದೆ.
ಮಕ್ಕಳ ಸಹಾಯವಾಣಿಗೆ ಬಂದ ದೂರಿನನ್ವಯ ಟಾಸ್ಕ್ ಪೋರ್ಸ್ ಸಮಿತಿ ತಂಡವು ರಾಯಚೂರು ತಾಲೂಕಿನ ಲಿಂಗನಖಾನದೊಡ್ಡಿಯ ಎಸ್.ಆರ್.ಬಿ ಇಟ್ಟಿಗೆ ಭಟ್ಟಿ ಮೇಲೆ ಹಠಾತ್ ದಾಳಿ ನಡೆಸಿ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಾರ್ಮಿಕ ಮತ್ತು ಒಬ್ಬ ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಿದೆ. ಈ ಬಾಲ ಕಾರ್ಮಿಕರನ್ನು ಸರ್ಕಾರಿ ಬಾಲಕಿಯರ ಬಾಲಮಂದಿರ ರಾಯಚೂರ ಅವರಿಗೆ ಒಪ್ಪಿಸಲಾಗಿದೆ. ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ ಮೆ.ಎಸ್.ಆರ್.ಬಿ ಇಟ್ಟಿಗೆ ಭಟ್ಟಿಯ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ, 1ನೇ ವೃತ್ತ ರಾಯಚೂರನ ಕಾರ್ಮಿಕ ನಿರೀಕ್ಷಕರಾದ ಮಹ್ಮದ್ ಉಮರ್ ಅಬ್ದುಲ್ ಘನಿ, ಇಡಪನೂರ ಪೊಲೀಸ್ ಇಲಾಖೆಯ ಶಂಕರಗೌಡ, ರಾಯಚೂರ ಮಕ್ಕಳ ಸಹಾಯವಾಣಿ ಘಟಕದ ತಾಯರಾಜ್ ಹಾಗೂ ಲಿಂಗನಖಾನದೊಡ್ಡಿ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ತಾಯಪ್ಪ ಅವರು ದಾಳಿಯಲ್ಲಿ ಭಾಗಿಯಾಗಿ ಉತ್ತಮ ಕಾರ್ಯ ಮಾಡಿದ್ದಾರೆ.
ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ: ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಒಂದು ವೇಳೆ ದುಡಿಸಿಕೊಂಡಲ್ಲಿ 50,000 ರೂ. ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಣೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ದುಡಿಯುವ ಮಕ್ಕಳು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ-1098 ಗೆ ಮಾಹಿತಿ ನೀಡಬಹುದಾಗಿದೆ ಎಂದು ಇದೆ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ