Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿಯುವ ನೀರು, ಮೇವು ಸರಬರಾಜು ಕುರಿತು ಜಿ.ಪಂ. ದಲ್ಲಿ ಜರುಗಿದ ಸಭೆ


ಧಾರವಾಡ ಮಾರ್ಚ 20: ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಇಂದು (ಮಾ.20) ಬೆಳಿಗ್ಗೆ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು, ಬೇಸಿಗೆ ಕಾಲದಲ್ಲಿ ಜನಜಾನುವಾರುಗಳಿಗೆ ಕುಡಿಯುವ ನೀರಿನ ಹಾಗೂ ಮೇವಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಕುರಿತು ಸಭೆ ಜರುಗಿಸಿದರು.



ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಕ್ರಮವಹಿಸಲು ಧಾರವಾಡ ಗ್ರಾ.ಕು.ನೀ ಮತ್ತು ನೈ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ ಜಗದೀಶ ಪಾಟೀಲ ಅವರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಇರುವ 146 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಡಿ ಬರುವ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಒದಗಿಸುವ ಕುರಿತಂತೆ ಎಲ್ಲ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.



ಸಮಸ್ಯಾತ್ಮಕ ಗ್ರಾಮಗಳಲ್ಲಿ ಅವಶ್ಯಕತೆ ಇದ್ದಲ್ಲಿ ಟ್ಯಾಂಕರ್ ಮೂಲಕ ಅಥವಾ ಬಾಡಿಗೆ ಅಧಾರದ ಮೇಲೆ ಖಾಸಗಿ ಬೋರವೆಲ್ ಮೂಲಕ ನೀರು ಪಡೆದು ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಅವರು ತಿಳಿಸಿದರು.



ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಕ್ರಮವಹಿಸುವ ಬಗ್ಗೆ ಪಶುಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿ, ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಅಗತ್ಯ ಮೇವು ದಾಸ್ತಾನು ಶೇಖರಿಸಿ, ಅಗತ್ಯವಿರುವ ಗ್ರಾಮಗಳಿಗೆ ಸರಬರಾಜು ಮಾಡಲು ನಿರ್ದೇಶನ ನೀಡಿದರು.



ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ತಾಲೂಕು ಪಂಚಾಯತ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಭಿಯಂತರರು, ಪಶುಪಾಲನೆ ಗಾಗೂ ಪಶು ವೈದ್ಯಕೀಯ ಇಲಾಖೆಯ ತಾಲೂಕುಮಟ್ಟದ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ