Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಶಿಕ್ಷೆ



ಕೊಪ್ಪಳ ಜೂನ್ 03 : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಆರೋಪ ಸಾಭಿತಾಗಿ ಎಂದು ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.

ಗಂಗಾವತಿ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯ ಪಿರ್ಯಾಧಿದಾರರ ಮಗಳು 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, 2022ರ ಸೆಪ್ಟೆಂಬರ್ 8ರಂದು ಸಂಜೆ 4.30 ಗಂಟೆಗೆ ಮಗಳು ಮನೆಗೆ ಬಂದಾಗ ಹಾಲಿನ ಕೇಂದ್ರದಲ್ಲಿ ಹಾಲು ತರಲು ಕಳುಹಿಸಿದ್ದು, ಮಲ್ಲಾಪುರ ಗ್ರಾಮದ ಆಂಜಿನಪ್ಪ ಬಂಡಿ ಇತನ ಮನೆಯ ಮುಂದೆ ಬಾಧಿತ ಮಗು ಹೋಗುತ್ತಿದ್ದಾಗ ಆಂಜಿನಪ್ಪನು ಬಾಧಿತ ಮಗುವಿಗೆ ನಮಗೂ ಹಾಲು ತರುವಂತೆ ನೆಪ ಹೇಳಿ ತನ್ನ ಮನೆಯ ಒಳಗೆ ಕರೆದುಕೊಂಡು ಹೋಗಿ ಮಂಚದ ಮೇಲೆ ಮಲಗಿಸಿ ಮೈ ಮೇಲೆ ಬಿದ್ದಾಗ ಬಾಧಿತ ಮಗು ಚೀರಾಡಿದ ಶಬ್ದ ಕೇಳಿ ಓಣಿಯ ಜನರು ಬಂದು ಬುದ್ದಿವಾದ ಹೇಳಿ ಛೀಮಾರಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಗಂಗಾವತಿ ಗ್ರಾಮೀಣ ಪೋಲಿಸ್ ಠಾಣೆಯ ಪಿ.ಐ ಮಂಜುನಾಥ ಎಸ್. ಅವರು ದೂರು ಸ್ವೀಕರಿಸಿ ಪ್ರಕರಣದ ತನಿಖೆ ನಿರ್ವಹಿಸಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣವು ಸ್ಪೇ.ಎಸ್‌ಸಿ(ಪೋಕ್ಸೊ) ಸಂ: 12/2024 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಆರೋಪಿ ಮಲ್ಲಾಪುರದ ಆಂಜಿನಪ್ಪ ಬಂಡಿ ಇತನ ಮೇಲಿನ ಆರೋಪಣೆಗಳು ಸಾಭೀತಾಗಿದೆ ಎಂದು 4 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 60,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು 2025ರ ಮೇ 30ರಂದು ತೀರ್ಪು ಹೊರಡಿಸಿರುತ್ತಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ಪ್ರಕರಣ ನಡೆಸಿ ವಾದ ಮಂಡಿಸಿದ್ದರು. ಗಂಗಾವತಿ ಗ್ರಾಮೀಣ ಪೋಲಿಸ್ ಠಾಣೆಯ ಪೋಲಿಸ್ ಸಿಬ್ಬಂದಿ ವಿಶ್ವನಾಥ ಅವರು ನ್ಯಾಯಾಲಯದಲ್ಲಿ ಸಾಕ್ಷಿದಾರರನ್ನು ಸಕಾಲಕ್ಕೆ ಹಾಜರಪಡಿಸಿ ಆರೋಪ ಸಾಭೀತುಪಡಿಸಲು ಸಹಕರಿಸಿರುತ್ತಾರೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ