Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವಜನತೆಯ ಉದ್ಯೋಗಕ್ಕಾಗಿ ಹೊಸ ಕಾರ್ಯಯೋಜನೆ: ಚಂದ್ರಭೂಪಾಲ





ಶಿವಮೊಗ್ಗ, ಜೂ.16: ಯುವನಿಧಿ ಯೋಜನೆಯ ಫಲಾನುಭವಿ ಯುವಕ-ಯುವತಿಯರಿಗೆ ಭವಿಷ್ಯದಲ್ಲಿ ಅವರ ಸಾಮರ್ಥ್ಯಕ್ಕೆ ಅನುಸಾರವಾಗಿ ಯೋಗ್ಯ ಉದ್ಯೋಗವನ್ನು ಪಡೆಯಲು ಹಾಗೂ ಅವರನ್ನು ಸಮರ್ಥರನ್ನಾಗಿಸಲು ಮುಂದಿನ ದಿನಗಳಲ್ಲಿ ಪ್ರಾಧಿಕಾರದಿಂದ ಹೊಸ ಕಾರ್ಯ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.

ಸೋಮವಾರ ನಗರದ ಜಿಲ್ಲಾ ಪಂಚಾಯತ್‌ನ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವಾರ್ಷಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷರತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ದಿ ನಿಗಮ, ಕೌಶಲ್ಯಾಭಿವೃದ್ದಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಮಾರ್ಗಸೂಚಿಯೊಂದಿಗೆ ಯುವನಿಧಿ ಫಲಾನುಭವಿಗಳನ್ನು ಉದ್ಯೋಗಸ್ಥರನ್ನಾಗಿ ಮಾಡಿ ಅವರ ಭವಿಷ್ಯವನ್ನು ರೂಪಿಸಲಾಗುವುದು.

ಈ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಜಿಲ್ಲೆಯಲ್ಲಿನ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಹಾಗೂ ಅವರ ಮುಂದಿನ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಕಾರ್ಯಕ್ರಮವನ್ನು ರೂಪಿಸಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಪದವೀಧರರು ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳು ಸೇರಿದಂತೆ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 6570 ಫಲಾನುಭವಿಗಳು ನೋಂದಣಿಯಾಗಿದ್ದು, ಫಲಾನುಭವಿಗಳ ಇಚ್ಛಾಶಕ್ತಿ ಹಾಗೂ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯ ಅಭಿವೃದ್ದಿ ಕ್ಷೇತ್ರದ ಸಹಯೋಗದೊಂದಿಗೆ ವಿವಿಧ ರೀತಿಯ ತರಬೇತಿಯನ್ನು ನೀಡಲಾಗುತ್ತದೆ. ಆ ಮೂಲಕ ಅವರ ಭವಿಷ್ಯವನ್ನು ರೂಪಿಸುವ ದಿಟ್ಟ ಕಾರ್ಯಕ್ಕೆ ಮುಂದಾಗಿದ್ದು, ಈ ಯೋಜನೆ ಪೂರ್ವ ಕಲಿಕೆಯ ಆಧಾರದ ಮೇಲೆ ಶಿಕ್ಷಣ ಮುಗಿಸಿ ಹೊರಬಂದಿರುವ ಫಲಾನುಭವಿಗಳನ್ನು ಉದ್ಯೋಗಸ್ಥರನ್ನಾಗಿಸಲು ನೆರವಾಗಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರುಗಳು, ಜಿ.ಪಂ. ಸಿಇಓ ಎನ್. ಹೇಮಂತ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ