Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ನಾಮಕರಣ



ರಾಯಚೂರು ಜೂನ್ 23 ರಾಯಚೂರ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 936.00 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ ನೆರವೇರಿಸಲು ಜೂನ್ 23ರಂದು ರಾಯಚೂರಗೆ ಆಗಮಿಸಿದ್ದ ವೇಳೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ರಾಯಚೂರ ತಾಲೂಕಿನ ಯರಗೇರಾ ಗ್ರಾಮದ ಬಳಿಯಲ್ಲಿರುವ ವಿಶ್ವವಿದ್ಯಾಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನಾಮಕರಣ ಮತ್ತು ಕಂಚಿನ ಪುತ್ಥಳಿಯನ್ನು ಲೋಕಾರ್ಪಣೆ ಮಾಡಿದರು. ಇದೆ ವೇಳೆ ಅವರು, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಉದ್ಯಾನವನ ಹಾಗೂ ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ವಿರೋಧ ಪಕ್ಷದ ನಾಯಕರು ಹಾಗೂ ಸಂಸದರಾದ (ರಾಜ್ಯ ಸಭೆ) ಡಾ.ಮಲ್ಲಿಕಾರ್ಜುನ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್.ಎಸ್. ಭೋಸರಾಜು ಸೇರಿದಂತೆ ವಿವಿಧ ಸಚಿವರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ ನಾಯಕ ಸೇರಿದಂತೆ ಇನ್ನೀತರ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ಡೆ, ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸುಯಯೀಂದ್ರ ಕುಲಕರ್ಣಿ, ಕುಲಸಚಿವರಾದ ಡಾ.ಚನ್ನಪ್ಪ ಎ., ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ಸೇರಿದಂತೆ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮತ್ತು ಇನ್ನೀತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ