Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ಸೂಕ್ತ ತಳಿ, ಪೋಷಕಾಂಶಗಳ ನಿರ್ವಹಣೆಯಿಂದ ಹೆಚ್ಚಿನ ಇಳುವರಿ, ಗುಣಮಟ್ಟ ಈರುಳ್ಳಿ ಉತ್ಪಾದನೆ



ಚಿತ್ರದುರ್ಗಜುಲೈ04:

ಹೆಚ್ಚಿನ ಇಳುವರಿ ಹಾಗೂ ಗುಣಮಟ್ಟದ ಈರುಳ್ಳಿ ಉತ್ಪಾದನೆ ಪಡೆಯಲು ರೈತರು ಸೂಕ್ತ ತಳಿಯ ಆಯ್ಕೆ, ಮಣ್ಣು ಮಾದರಿ ಆಧಾರಿತ ಪೋಷಕಾಂಶಗಳ ನಿರ್ವಹಣೆ ಹಾಗೂ ಹೆಚ್ಚಿನ ಸಾವಯವ ಗೊಬ್ಬರ ಬಳಸುವುದು ಸೂಕ್ತ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ಹೇಳಿದರು.

ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಗುರುವಾರ ಜಿಲ್ಲೆಯ ರೈತರಿಗೆ “ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಈರುಳ್ಳಿ ಬೆಳೆಯು ಮುಂಗಾರು ಹಂಗಾಮಿನಲ್ಲಿ ಬೆಳೆಯುವ ಪ್ರಮುಖ ತರಕಾರಿ ಬೆಳೆಯಾಗಿದ್ದು, ಮುಖ್ಯವಾಗಿ ಚಿತ್ರದುರ್ಗ, ಹಿರಿಯೂರು ಮತ್ತು ಚಳ್ಳಕೆರೆ ತಾಲ್ಲೂಕಿನಲ್ಲಿ ಹೆಚ್ಚಾಗಿ ಬೆಳೆಯುತ್ತಿದ್ದು ಸದರಿ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಅನುಸರಿಸಬೇಕಾದ ಬೇಸಾಯ ಕ್ರಮಗಳು ಹಾಗೂ ಕೀಟ ಮತ್ತು ರೋಗ ನಿರ್ವಹಣೆ ಕುರಿತ ತಾಂತ್ರಿಕ ಮಾಹಿತಿಯ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.

ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದ ತರಕಾರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪ್ರಕಾಶ್ ಕೆರೂರೆ ಮಾತನಾಡಿ, ಈರುಳ್ಳಿ ಬೆಳೆಗೆ ಜೂನ್ ಮತ್ತು ಜುಲೈ ತಿಂಗಳು ಬಿತ್ತನೆಗೆ ಸೂಕ್ತವಾಗಿದ್ದು, ಈರುಳ್ಳಿ ಬೆಳೆಯ ವಿವಿಧ ತಳಿಗಳು, ರಸಗೊಬ್ಬರದ ಪ್ರಮಾಣ, ಬಿತ್ತನೆ ಬೀಜ ಬಳಸುವ ಪ್ರಮಾಣ, ಬೀಜೋಪಚಾರದ ಪ್ರಾಮುಖ್ಯತೆ, ಬೆಳೆಯಲ್ಲಿ ಸಸಿ ಮಡಿ ಮಾಡುವ ವಿಧಾನ, ಕಳೆ ನಿರ್ವಹಣೆ ಮತ್ತು ನೀರು ನಿರ್ವಹಣೆ ಕುರಿತು ಮಹಿತಿ ನೀಡಿದರು.

ತದನಂತರ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ತಾಕಿಗೆ ಭೇಟಿ ನೀಡಿ ಈರುಳ್ಳಿ ಬೆಳೆಯ ವಿವಿಧ ತಳಿಗಳ ಪ್ರಯೋಗದ ಪ್ರಾತ್ಯಕ್ಷಿಕೆ ತಾಕಿಗೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಶರಣಪ್ಪ ಜಂಗಂಡಿಯವರು ಹೊಸದಾಗಿ ತಯಾರಿಸಿದ ಈರುಳ್ಳಿಯ ಮೇಲಿನ ಜುಟ್ಟು ಕತ್ತರಿಸುವ ಯಂತ್ರದ ಕುರಿತು ಮಾಹಿತಿ ನೀಡಿದರು.

ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ಡಾ.ಟಿ.ರುದ್ರಮುನಿ ಅವರು, ಈರುಳ್ಳಿ ಬೆಳೆಯಲ್ಲಿ ಬರುವ ಪ್ರಮುಖ ಕೀಟಗಳಾದ ಥ್ರೀಪ್ಸ್, ನುಸಿ, ತಂಬಾಕಿನ ಹುಳು ಹಾಗೂ ಪ್ರಮುಖ ರೋಗಗಳಾದ ನೇರಳೆ ಮಚ್ಚೆ ರೋಗ, ದುಂಡಾಣು ಗೆಡ್ಡೆಕೊಳೆ ರೋಗಗಳಸಮಗ್ರ ನಿರ್ವಹಣೆ ಕ್ರಮಗಳು ಕುರಿತು ಮಾಹಿತಿ ನೀಡಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ