Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೇಸಿಗೆ ಅವಧಿಯಲ್ಲಿ ಹತ್ತಿ ಬೆಳೆ ಬೆಳೆಯದಂತೆ ಕೃಷಿ ಇಲಾಖೆಯಿಂದ ಸಲಹೆ



ಕೊಪ್ಪಳ ಮಾರ್ಚ್ 28 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಾಪಮಾನ ಏರಿಕೆಯಿಂದ ಹತ್ತಿ ಬೆಳೆಯಲ್ಲಿ ಕೆಂಪು ರೋಗದ ಉಲ್ಬಣ ಕಂಡುಬಂದಿದ್ದು, ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಬೆಳೆ ಹಾನಿ ಸಂಭವಿಸಿದೆ. ಇದರ ಪರಿಣಾಮವಾಗಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಆರ್ಥಿಕ ನಷ್ಟ ಅನುಭವಿಸಿರುವುದು ಗಮನಿಸಲಾಗಿದೆ.

ಮುಂದಿನ ಬೇಸಿಗೆ ತಿಂಗಳುಗಳಾದ ಮಾರ್ಚ್ ಹಾಗೂ ಏಪ್ರಿಲ್‌ನಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರ ಜೊತೆಗೆ, ಬೋರ್ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿರುವುದರಿಂದ ನೀರಿನ ಕೊರತೆ ಉಂಟಾಗುವ ಸಂಭವ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿಯೂ ತಾಪಮಾನ ಏರಿಕೆ ಹಾಗೂ ನೀರಿನ ಅಭಾವ ಮುಂದುವರಿಯುವ ಸಾಧ್ಯತೆ ಇದೆ.

ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ವಿಶ್ವವಿದ್ಯಾನಿಲಯ ರಾಯಚೂರು ಅವರ ಶಿಫಾರಸ್ಸಿನಂತೆ ಬಿ.ಟಿ. ಹತ್ತಿಯ ಬಿತ್ತನೆ ಕಾಲಾವಧಿ ಜೂನ್ ಮೊದಲ ವಾರದಿಂದ ಜುಲೈ ಮೂರನೇ ವಾರದವರೆಗೆ ಇರುವುದರಿಂದ, ರೈತರು ಈ ಅವಧಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಂತ ಅಗತ್ಯವಾಗಿದೆ.

ಆದ್ದರಿಂದ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ವಾಣಿಜ್ಯ ಹತ್ತಿ ಬೆಳೆ ನಾಟಿ ಮಾಡದಂತೆ ರೈತರಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ಜೊತೆಗೆ ಹತ್ತಿ ಬೀಜ ಬಿತ್ತನೆ ಮಾಡುವ ಮೊದಲು ರೈತರು ಈ ಬೆಳೆಯ ಸೂಕ್ತ ಕಾಲಾವಧಿ ಹಾಗೂ ನಿರ್ವಹಣೆ ಕುರಿತು ಸಮರ್ಪಕ ಮಾಹಿತಿ ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ.

ಪ್ರತಿ ಬಿ.ಟಿ. ಹತ್ತಿ ಪ್ಯಾಕೇಟ್ ಜೊತೆಗೆ 125 ಗ್ರಾಂ ಬಿ.ಟಿ. ಯೇತರ (ರೆಫ್ಯೂಜಿ) ಬೀಜಗಳನ್ನು ನೀಡಲಾಗುತ್ತದೆ. ರೈತರು ತಮ್ಮ ಹೊಲದ ಸುತ್ತಲೂ ನಾಲ್ಕು ಸಾಲುಗಳಲ್ಲಿ ಈ ಬೀಜಗಳನ್ನು ಕಡ್ಡಾಯವಾಗಿ ಬಿತ್ತನೆ ಮಾಡಬೇಕು. ಇದರಿಂದ ಕಾಯಿಕೊರಕ ಹುಳುವಿನಲ್ಲಿ ಬಿ.ಟಿ. ನಿರೋಧಕ ಶಕ್ತಿಯ ಅಭಿವೃದ್ಧಿಯನ್ನು ತಡೆಯಲು ಸಹಕಾರಿಯಾಗುತ್ತದೆ ಹಾಗೂ ಕೀಟದ ಹಾನಿಯನ್ನು ಗುರುತಿಸಲು ಸಹಾಯವಾಗುತ್ತದೆ. ಕೆಲವು ರೈತರು ಬಿ.ಟಿ. ಯೇತರ ಬೀಜಗಳನ್ನು ಹುಸಿ ಗುಣಿಗಳಿಗಾಗಿ ಬಳಸುತ್ತಿರುವುದು ಕಂಡುಬರುತ್ತದೆ. ಆದರೆ, ಈ ಬೀಜಗಳನ್ನು ಹುಸಿ ಗುಣಿಗಳಿಗಾಗಿ ಬಳಸದೇ, ಸೂಚನೆಯಂತೆ ಬಿತ್ತನೆ ಮಾಡಲು ಕೋರಲಾಗಿದೆ.

ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ತಳಿಗಳಲ್ಲಿ ಯಾವುದಾದರೂ ಲಭ್ಯತೆಯ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳುವುದು ಸೂಕ್ತ. ಬೀಜವನ್ನು ಖರೀದಿಸುವ ಮೊದಲು ಪ್ಯಾಕೇಟ್‌ನ್ನು ಸರಿಯಾಗಿ ಪರಿಶೀಲಿಸಿ, ತಯಾರಕ ಕಂಪನಿಯ ಪೂರ್ಣ ಹೆಸರು ಹಾಗೂ ವಿಳಾಸ ಸರಿಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಜೊತೆಗೆ ನಿಜವಾದ ಚೀಟಿ (ಟ್ಯಾಗ್) ಇರುವುದನ್ನು ದೃಢಪಡಿಸಬೇಕು. ಬಿತ್ತನೆ ಬೀಜವನ್ನು ಕೇವಲ ಅಧಿಕೃತ ಪರವಾನಿಗೆ ಹೊಂದಿರುವ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಹಾಗೂ ಕಡ್ಡಾಯವಾಗಿ ರಸೀದಿ ಪಡೆಯಬೇಕು. ತಳಿಯ ಬೇಸಾಯ ಪದ್ಧತಿ ಕುರಿತು ನೀಡಿರುವ ಕರಪತ್ರವನ್ನು ಕೂಡ ಪಡೆಯಬೇಕು.

ಬಿತ್ತನೆ ಮಾಡಿದ ನಂತರದಿಂದ ಬೆಳೆ ಕಟಾವು ಆಗುವವರೆಗೆ ಬೀಜದ ಚೀಲ, ಸ್ವಲ್ಪ ಪ್ರಮಾಣದ ಬೀಜ, ರಸೀದಿ ಹಾಗೂ ಕರಪತ್ರವನ್ನು ಸುರಕ್ಷಿತವಾಗಿ ಸಂಗ್ರಹಿಸಿಡಬೇಕು. ಬೆಳೆಯಲ್ಲಿ ಯಾವುದೇ ಸಮಸ್ಯೆ ಉಂಟಾದಲ್ಲಿ ಇವುಗಳು ಸಾಕ್ಷ್ಯವಾಗಿ ಉಪಯೋಗವಾಗುತ್ತವೆ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಐ.ಸಿ.ಆರ್-ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿ ಇವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ