Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಅಪೂರ್ಣ ಅರ್ಜಿಗಳ ಪುನಃ ಭರ್ತಿಗೆ ಅವಕಾಶ



ಬಳ್ಳಾರಿ,ಡಿ.26

ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ಬಳ್ಳಾರಿ (ಗ್ರಾ), ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 25 ಅಂಗನವಾಡಿ ಕಾರ್ಯಕರ್ತೆಯರು ಮತ್ತು 58 ಸಹಾಯಕಿಯರ ಗೌರವಸೇವೆಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಈಗಾಗಲೇ ಕಾಲಾವಕಾಶ ಮುಗಿದಿದ್ದು, ಅಪೂರ್ಣವಾದ ಅರ್ಜಿಗಳನ್ನು ಪುನಃ ಭರ್ತಿ ಮಾಡಲು ಜ.05 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 04 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವರಿಗೆ ಒಂದನೇ ಹಂತದಲ್ಲಿಯೇ “ಅಪ್ಲಿಕೇಶನ್ ಸಕ್ಸೆಸ್‌ಫುಲ್ ಅಪ್‌ಲೋಡೆಡ್” ಎಂಬ ಮೆಸೇಜ್ ಮೊಬೈಲ್ ಸಂಖ್ಯೆಗಳಿಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ.
ಬಳ್ಳಾರಿ ತಾಲ್ಲೂಕಿನ ವ್ಯಾಪ್ತಿಯ ಕಾರ್ಯಕರ್ತೆಯರ ಹುದ್ದೆಗೆ 304 ಅಪೂರ್ಣ ಅರ್ಜಿ ಹಾಗೂ ಸಹಾಯಕಿಯರ ಹುದ್ದೆಗಳಿಗೆ 111 ಅಪೂರ್ಣ ಅರ್ಜಿ, ಕುರುಗೋಡು ತಾಲ್ಲೂಕು ವ್ಯಾಪ್ತಿಯ ಕಾರ್ಯಕರ್ತೆಯರ ಹುದ್ದೆಗೆ 190 ಹಾಗೂ ಸಹಾಯಕಿಯರ ಹುದ್ದೆಗಳಿಗೆ 128, ಕಂಪ್ಲಿ ತಾಲ್ಲೂಕು ವ್ಯಾಪ್ತಿಯ ಕಾರ್ಯಕರ್ತೆಯರ ಹುದ್ದೆಗೆ 31, ಸಹಾಯಕಿಯರ ಹುದ್ದೆಗಳಿಗೆ 07 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತವೆ. ಅಪೂರ್ಣ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಆಯಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ 04 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಜ.05 ರ ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್: https://karnemakaone.kar.nic.in/abcd/ ನಲ್ಲಿ ಪೂರ್ಣಗೊಳಿಸಲು ಕಾಲಾವಕಾಶ ನೀಡಲಾಗಿದೆ.
01 ನೇ ಹಂತ: ಆನ್‌ಲೈನ್ ತಂತ್ರಾAಶದಲ್ಲಿ ನಿಗಧಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬುವುದು.
02 ನೇ ಹಂತ: ತಮ್ಮ ಭಾವಚಿತ್ರ ಮತ್ತು ಸಹಿ ಅಪ್‌ಲೋಡ್ ಮಾಡುವುದು.
03 ನೇ ಹಂತ: ತಮ್ಮ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು.
04 ನೇ ಹಂತ: ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸುವುದು.
ವಿಶೇಷ ಸೂಚನೆ: ಅರ್ಜಿ ಆಹ್ವಾನಿಸಿದ ಅಧಿಸೂಚನೆಯ ಕೊನೆಯ ದಿನಾಂಕದೊಳಗೆ ಪಡೆಯಲಾದ ದಾಖಲಾತಿಗಳನ್ನು ಮಾತ್ರ ಪರಿಗಣಿಸಲಾಗುವುದು. ಮುಂದುವರೆದು ವಿಸ್ತರಣಾ ದಿನಾಂಕದಲ್ಲಿ ಪಡೆದ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನಾ ಕಚೇರಿ ಅಥವಾ ಅಥವಾ ದೂ.08392-266080 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ