Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಣಿಕ್ಯ ಪ್ರಕಾಶನದ 2024ರ ದತ್ತಿ ಪ್ರಶಸ್ತಿಗಳ ಪ್ರಕಟಣೆ

ಹಾಸನ : ಹಾಸನದ ಮಾಣಿಕ್ಯ ಪ್ರಕಾಶನವು ಕಳೆದ ಒಂಭತ್ತು ವರ್ಷಗಳಿಂದ ಸಾಹಿತ್ಯ ಕ್ಷೇತ್ರದ ವಿವಿದ ಪ್ರಕಾರಗಳ ಕೃತಿಗಳಿಗೆ ದತ್ತಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ ಎಂದು ಪ್ರಕಾಶಕಿ ದೀಪಾ ಉಪ್ಪಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



೨೦೨೪ ರ ದತ್ತಿ ಪ್ರಶಸ್ತಿಗೆ ೨೦೨೩ ರಲ್ಲಿ ಮೊದಲ ಮುದ್ರಣವಾದ ಸ್ವತಂತ್ರ ರಚನೆಯ ನಾಟಕ, ಕಾದಂಬರಿ, ಗಜಲ್ ಹಾಗೂ ಚುಟುಕು ಸಂಕಲನಗಳನ್ನು ಆಹ್ವಾನಿಸಲಾಗಿತ್ತು. ಲೇಖಕರು ನಿರೀಕ್ಷೆಗೂ ಮೀರಿ ಕೃತಿಗಳನ್ನು ಸ್ಪರ್ಧೆಗೆ ಕಳುಹಿಸಿದ್ದರು. ಅವುಗಳಲ್ಲಿ ಸಾಹಿತಿಗಳಾದ ಕೊಟ್ರೇಶ್ ಎಸ್. ಉಪ್ಪಾರ್, ಡಾ. ಹಸೀನಾ ಎಚ್.ಕೆ, ನಾಗರಾಜ್ ದೊಡ್ಡಮನಿ, ಎಚ್.ಎಸ್.ಬಸವರಾಜ್, ವಾಸು ಸಮುದ್ರವಳ್ಳಿ, ಲತಾಮಣಿ ಎಂ.ಕೆ. ತುರುವೇಕೆರೆ ಅವರನ್ನೊಳಗೊಂಡ ಆಯ್ಕೆ ಸಮಿತಿಯು..

ನಾಟಕ ವಿಭಾಗದ “ಪ್ರಭಾವತಿ ಶೆಡ್ತಿ ದತ್ತಿ - ನಾಟಕ ಮಾಣಿಕ್ಯ ಪ್ರಶಸ್ತಿ” ಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಸಾವಿತ್ರಿ ಮನೋಹರ್ ಅವರ “ನಮ್ಮ ಸಂಸಾರ ಆನ್ ಲೈನ್ ಅವಾಂತರ” ಕೃತಿ ಆಯ್ಕೆಯಾಗಿದ್ದು ಪ್ರಶಸ್ತಿ ಜೊತೆಗೆ ೨೫೦೦ ನಗದು ಪುರಸ್ಕಾರ ಹೊಂದಿದೆ.



ಕಾದಂಬರಿ ವಿಭಾಗದ ತುಮಕೂರಿನ ಮೋಹನ್ ಎಂ. ಕೆ. ತುರುವೇಕೆರೆ ಪ್ರಾಯೋಜಕತ್ವದ “ದಿ. ಮಹಾದೇವಮ್ಮ ಈ. ಕೃಷ್ಣಯ್ಯ ಸ್ಮಾರಕ ದತ್ತಿ – ಕಾದಂಬರಿ ಮಾಣಿಕ್ಯ ಪ್ರಶಸ್ತಿ” ಗೆ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ವೀಣಾ ರಾವ್ ಅವರ “ಮಧುರ ಮುರುಳಿ” ಕೃತಿ ಆಯ್ಕೆಯಾಗಿದ್ದು ಪ್ರಶಸ್ತಿ ಜೊತೆಗೆ ೨೫೦೦ ನಗದು ಪುರಸ್ಕಾರ ಹೊಂದಿದೆ.


ಗಜಲ್ ವಿಭಾಗದ ಶಿವಮೊಗ್ಗದ ಪಾರಂಪರಿಕ ವೈದ್ಯರಾದ ಸೈಯದ್ ಮುಹುಬುಲ್ಲಾ ಖಾದ್ರಿ ಪ್ರಾಯೋಜಕತ್ವದ “ದಿ. ಫಾತಿಮಾಭಿ ಜನಾಬ್ ಸೈಯದ್ ಅಬ್ದುಲ್ ಘನೀ ಸಾಬ್ ಸ್ಮಾರಕ ದತ್ತಿ – ಗಜಲ್ ಮಾಣಿಕ್ಯ ಪ್ರಶಸ್ತಿ” ಗೆ ಬೆಳಗಾವಿ ಜಿಲ್ಲೆಯ ಈಶ್ವರ ಮಮದಾಪೂರ ಅವರ “ಕಣ್ಣೊಳಗಿನ ಕಣ್ಣು” ಕೃತಿ ಆಯ್ಕೆಯಾಗಿದ್ದು ಪ್ರಶಸ್ತಿ ಜೊತೆಗೆ ೨೫೦೦ ನಗದು ಪುರಸ್ಕಾರ ಹೊಂದಿದೆ.


ಚುಟುಕು ಸಾಹಿತ್ಯ ವಿಭಾಗದ ರಾಯಚೂರಿನ ರೇಷ್ಮಾ ಕಂದಕೂರು ಪ್ರಾಯೋಜಕತ್ವದ “ಕೆ. ವೈ. ಕಂದಕೂರ ದತ್ತಿ – ಚುಟುಕು ಮಾಣಿಕ್ಯ ಪ್ರಶಸ್ತಿ” ಗೆ ಬಾಗಲಕೋಟ ಜಿಲ್ಲೆಯ ಮುರ್ತುಜಾಬೇಗಂ ಕೊಡಗಲಿಯವರ “ಗಿಲಿಗಿಂಚಿ” ಕೃತಿ ಆಯ್ಕೆಯಾಗಿದ್ದು ಪ್ರಶಸ್ತಿ ಜೊತೆಗೆ ೨೫೦೦ ನಗದು ಪುರಸ್ಕಾರ ಹೊಂದಿದೆ.


ಪ್ರಶಸ್ತಿ ಪುರಸ್ಕೃತರಿಗೆ ೨೦೨೪ ಸೆಪ್ಟಂಬರ್ ೨೮ ಶನಿವಾರ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಎಂಟನೇ ಕವಿ-ಕಾವ್ಯ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ