Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2ನೇ ವರ್ಷದ ಬಿ.ಇಡಿ ದಾಖಲಾತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ದಾವಣಗೆರೆ ನ.29 : ಪ್ರಸಕ್ತ ಸಾಲಿನ 2ನೇ ವರ್ಷದ ಬಿ.ಇಡಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೊದಲ ಸೀಟು ಹಂಚಿಕೆ ಪಟ್ಟಿಯನ್ನು https://schooleducation karnataka.gov.in/ ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯಸಿದಲ್ಲಿ ತಮ್ಮ ಯೂಸರ್ ಐಡಿ ಮತ್ತು ಪಾಸ್ ವರ್ಡನ್ನು ಬಳಸಿ ಡಿಸೆಂಬರ್ 5 ರೊಳಗೆ ನಿಗದಿತ ಶುಲ್ಕದ ಚಲನನ್ನು ಮುದ್ರಿಸಿಕೊಂಡು ಸ್ಟೇಟ್ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಪಾವತಿಸಿ ಅದರ ಮೂಲ ಪ್ರತಿ ಹಾಗೂ ಇತರೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಸಂಬಂಧಿಸಿದ ಜಿಲ್ಲಾ ನೋಡಲ್ ಕೇಂದ್ರಕ್ಕೆ ಹಾಜರಾಗಿ ದಾಖಲಾತಿ ಪತ್ರವನ್ನು ಪಡೆದುಕೊಳ್ಳಬೇಕು. ಹಾಗೂ ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಕಾಲೇಜಿಗೆ ಸೇರ್ಪಡೆಗೊಳ್ಳಬೇಕು.

ಮೊದಲ ಸುತ್ತಿನ ಆಯ್ಕೆಯಲ್ಲಿ ಹಂಚಿಕೆಯಾದ ಕಾಲೇಜಿಗೆ ಸೇರಲು ಬಯಸದೇ ಇರುವ ಅಭ್ಯರ್ಥಿಗಳು ಎರಡನೇ ಸುತ್ತು ಎಂದು ಡಿಸೆಂಬರ್ 5 ರೊಳಗೆ ತಮ್ಮ ಅಭಿಮತವನ್ನು ದಾಖಲಿಸಬೇಕು. ಆಯ್ಕೆ ದಾಖಲಿಸದ ಅಭ್ಯರ್ಥಿಗಳನ್ನು ಹೊರತುಪಡಿಸಿ ಎರಡನೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು. ಮೊದಲ ಪಟ್ಟಿಯ ಹಂಚಿಕೆ ಪ್ರಕಾರ ಸೇರ್ಪಡೆಯಾಗಿ ಉಳಿಕೆಯಾಗಿರುವ ಸೀಟುಗಳ ಕಾಲೇಜುವಾರು ಸೀಟ್ ಮ್ಯಾಟ್ರಿಕನ್ನು ಡಿಸೆಂಬರ್ 8 ರಂದು ಬಿಡುಗಡೆಗೊಳಿಸಲಾಗುವುದು. ಇದರಂತೆ ಮೊದಲ ಪಟ್ಟಿಯಲ್ಲಿ ಸೀಟು ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯಸದ ಎರಡನೇ ಸುತ್ತು ಎಂದು ಅಭಿಮತವನ್ನು ದಾಖಲಿಸಿದ ಅಭ್ಯರ್ಥಿಗಳು ಮತ್ತು ಮತ್ತು ಉಳಿಕೆ ಅಭ್ಯರ್ಥಿಗಳು ಎರಡನೇ ಮತ್ತು ಕೊನೆಯ ಸೀಟು ಹಂಚಿಕೆಗಾಗಿ ಡಿಸೆಂಬರ್ 8 ರಿಂದ 10 ವರೆಗೆ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಕಾಲೇಜುಗಳ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಡಯಟ್ ಪ್ರಾಚಾರ್ಯರರು ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ