Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಟಿಟಿಸಿ-ಉಚಿತ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 112026-27ನೇ ಸಾಲಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ)ದಲ್ಲಿ ಎಐಟಿಟಿ- ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ,ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ದಿ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಐಟಿಐ ಪೂರೈಸಿದವರಿಗೆ 4 ತಿಂಗಳ ಸಿ.ಏನ್.ಸಿ. ಆಪರೇಟರ್ – ವರ್ಟಿಕಲ್ ಮಷಿನ್ನಿಂಗ್ ಸೆಂಟರ್, ಡಿಪ್ಲೋಮ /ಬಿ.ಇ ಪೂರೈಸಿದವರಿಗೆ 4 ತಿಂಗಳ ಸಿ ಏನ್ ಸಿ ಪ್ರೋಗ್ರಾಮರ್ /ಪ್ರೊ-ಇ / ಆಟೋ ಕ್ಯಾಡ್/ ಐಓಟಿ, ಎಸ್.ಎಸ್.ಎಲ್.ಸಿ. ಪೂರೈಸಿದವರಿಗೆ 4 ತಿಂಗಳ ಮಿಲ್ಲರ್/ಟರ್ನರ್ ಹಾಗೂ 12 ತಿಂಗಳ ಟೂಲ್ ರೂಮ್ ಮಷಿನಿಸ್ಟ್ ತರಬೇತಿಗಳನ್ನು ನೀಡಲಾಗುವುದು. ತರಬೇತಿ ಮುಗಿದ ನಂತರ ತಾಂತ್ರಿಕ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶವನ್ನು ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳಿಗೆ ರೂ. 2500/- ಶಿಷ್ಯವೇತನ ನೀಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಯಸ್ಸು, ವಿದ್ಯಾರ್ಹತೆಯ ದಾಖಲಾತಿಗಳು ಹಾಗು ವೈಯಕ್ತಿಕ ವಿವರಗಳೊಂದಿಗೆ ಪ್ರಾಂಶುಪಾಲರು, ಜಿಟಿಟಿಸಿ, ಪ್ಲಾಟ್ ನಂ.ಸಿಎ 38,ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ ಇಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ: 08182-246054/9448307027/ 9449286543 ಗಳನ್ನು ಸಂಪರ್ಕಿಸಬಹುದೆಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿರುತ್ತಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ