Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ

ಮುಂಬರುವ ಅಕ್ಟೋಬರ್ 12 ತಾರೀಕಿನ ಶನಿವಾರ ವಿಜಯದಶಮಿ ದಿನದಂದು ಮಹಾರಾಷ್ಟçದ ನಾಗಪುರ ದೀಕ್ಷಾ ಭೂಮಿಯಲ್ಲಿ ನಡೆಯುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ತೆರಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 15 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.

ಪ್ರತಿ ವರ್ಷದಂತೆ ಅಕ್ಟೋಬರ್ 10 ರಿಂದ 14ರವರೆಗೆ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಸಾರಿಗೆ ವ್ಯವಸ್ಥೆ, ರೈಲಿನ ವ್ಯವಸ್ಥೆ ಕಲ್ಪಿಸುವ ಸಂಬoದ, ರಾಜ್ಯದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಆಯ್ಕೆ ಮಾಡಲಾಗುವುದು. ಯಾತ್ರಿಗಳು ಬಿ.ಪಿ.ಎಲ್.ಕಾರ್ಡ ಹೊಂದಿರಬೇಕು. ಎಸ್.ಟಿ, ಎಸ್.ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಅಂಬೇಡ್ಕರ್ ಅನುಯಾಯಿಗಳು ಅಹ ಯಾತ್ರೆ ಕೈಗೊಳ್ಳಬಹುದು. ಯಾತ್ರಾತ್ರಿಗಳು ಕನಿಷ್ಠ 18 ವರ್ಷ ಮೇಲ್ಪಟವರಾಗಿರಬೇಕು. ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. ಸರ್ಕಾರಿ ಮತ್ತು ಅದರ ಅಂಗಸAಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ. ರಾಜ್ಯದಲ್ಲಿ ಆಯಾ ಜಿಲ್ಲೆಗಳಿಂದಲೇ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುವುದು. ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು.

ಆಸಕ್ತ ಯಾತ್ರಾರ್ಥಿಗಳು https://swdservice.karnataka.gov.in ತಂತ್ರಾ0ಶದ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇರ್ಶಕರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ