Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ


ಕೊಪ್ಪಳ ಆಗಸ್ಟ್ 05: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ ಕಾನೂನುಗಳ ಕುರಿತು ಸೋಮವಾರದಂದು ಜಾಗೃತಿ ಮೂಡಿಸಲಾಯಿತು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇಂದರಗಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ``ಕಾಯಂ ಜನತಾ ನ್ಯಾಯಾಲಯ ಕಾರ್ಯವಿಧಾನ ಪರಿಚಯ, ನಾಲ್ಸಾ ಜಾಗೃತಿ ಯೋಜನೆ-2025 ಹಾಗೂ ಮಕ್ಕಳ ಹಕ್ಕುಗಳು ಬಾಲ್ಯ ವಿವಾಹ ನಿಷೇಧ ಕಾಯ್ದೆ ಪೋಕ್ಸೋ ಕಾಯ್ದೆ''ಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ್ ಅವರು ಗಿಡಕ್ಕೆ ನೀರೆಯುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಮತ್ತು ಅದರ ಅಡಿಯಲ್ಲಿ ಇರುವ ಶಿಕ್ಷೆಗಳ ಕುರಿತು ಮತ್ತು ಬಾಲ್ಯ ವಿವಾಹದಿಂದ ಆಗುವ ದುಷ್ಪರಿಣಾಮಗಳು, ಕಾನೂನಿನ ಸೂಕ್ಷ್ಮತೆಗಳು ಮತ್ತು ಮಕ್ಕಳ ಬೆಳವಣಿಗೆಗಳ ಸೂಕ್ಷ್ಮತೆಗಳ ಕುರಿತು ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತ ಸ್ವಾಮಿ ಪೂಜಾರ ಅವರು, ಮಕ್ಕಳ ಹಕ್ಕುಗಳಾದ ಬದುಕುವ ರಕ್ಷಣೆಯ ವಿಕಾಸ ಹೊಂದುವ ಮತ್ತು ಭಾಗವಹಿಸುವ ಹಕ್ಕುಗಳ ಕುರಿತು ಮಾಹಿತಿಯನ್ನು ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದದ ಶಿವಲೀಲಾ ವನ್ನೂರು ಅವರು, ಪೋಕ್ಸೋ ಕಾಯ್ದೆ ಅಡಿಯಲ್ಲಿನ ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶದ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶ್ರೀರಾಮಪ್ಪ ಅವರು, ಅಗ್ನಿ ಅವಘಡದ ಸಂದರ್ಭದಲ್ಲಿ ಯಾವ ರೀತಿ ಅಗ್ನಿಯನ್ನು ನಂದಿಸುವುದು ಎಂಬುದರ ಕುರಿತು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಮಹೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವರದವ್ವ ನಿಂಗಪ್ಪ ಎಮ್ಮಿ, ಉಪಾಧ್ಯಕ್ಷರಾದ ಅಮರೇಶ್, ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಬಸವರಾಜ್ ಹಿರೇಗೌಡ್ರು, ಮುನಿರಾಬಾದ್ ಪೊಲೀಸ್ ಠಾಣೆಯ ಅಮರೇಶ, ಅಂಗನವಾಡಿ ಮೇಲ್ವಿಚಾರಕಿ ಉಷಾ ಸಿಂಗ್ ಸೇರಿದಂತೆ ಇಂದ್ರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಗ್ರಾಮದ ಗುರುಹಿರಿಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಸ್ತಾವನೆಯನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರಾಜ್ ಎಸ್.ಎಚ್ ಅವರು ನೆರವೇರಿಸಿದರು. ಮಕ್ಕಳ ರಕ್ಷಣಾ ಘಟಕದ ಪ್ರತಿಭಾ ಕಾಶಿಮಠ ಅವರು ಕಾರ್ಯಕ್ರಮ ನಿರೂಪಿಸಿದರು. ಮಕ್ಕಳ ಸಹಾಯವಾಣಿಯ ಶರಣಪ್ಪ ಸಿಂಗನಾಳ್ ಅವರು ಕೊನೆಯಲ್ಲಿ ವಂದಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ