Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರೇಕಬ್ಬಿಗೆರೆ ಗೊಲ್ಲರಹಟ್ಟಿ: ಮೌಢ್ಯತೆ, ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ

ಚಿತ್ರದುರ್ಗಫೆ.21:

ಚಿತ್ರದುರ್ಗ ತಾಲ್ಲೂಕಿನ ಹಿರೇಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಈಚೆಗೆ ಗೊಲ್ಲರಹಟ್ಟಿಗಳ ಮೌಢ್ಯತೆ ಕುರಿತು ಜಾಗೃತಿ ಮೂಡಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹಿರೇಕಬ್ಬಿಗೆರೆ ಗೊಲ್ಲರಹಟ್ಟಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮೇಲ್ವಿಚಾರಕಿ ದೇವಿಕಾ ಅವರು, ಮೌಢ್ಯತೆ ಕುರಿತು ತಾಯಂದಿರಿಗೆ ಹಾಗೂ ಮಕ್ಕಳಿಗೆ ತಿಳುವಳಿಕೆ ನೀಡಿದರು. ಜೊತೆಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು.

ಜೆಂಡರ್ಸ್ ಸ್ಪೆಷಲಿಸ್ಟ್ ಡಿ.ಗೀತಾ ಮಾತನಾಡಿ, ಮೌಢ್ಯಾಚರಣೆ ತುಂಬಾ ಅನಿಷ್ಠ ಪದ್ಧತಿಯಾಗಿದ್ದು, ಈ ತರಹದ ಅನಿಷ್ಠ ಪದ್ಧತಿಗಳನ್ನು ಆಚರಣೆ ಮಾಡದಂತೆ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಿದರು. ಇಂತಹ ಪದ್ಧತಿಗಳನ್ನು ಆಚರಣೆ ಮಾಡಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಮತ್ತು ತುರ್ತು ಸಹಾಯವಾಣಿ ಸಂಖ್ಯೆ 112ಗೆ ಕರೆ ಮಾಡುವಂತೆ ಮಕ್ಕಳಿಗೆ ತಿಳಿಸಿದರು.

ಶಿಕ್ಷಣಕ್ಕೆ ಹೆಚ್ಚಿನ ಒಲವು ನೀಡಿ, ಸಮಾಜಕ್ಕೆ ಮಾದರಿ ಮಕ್ಕಳು ಆಗಬೇಕು. ಶಾಲೆಯ ಮಕ್ಕಳಿಗೆ ಮೌಢ್ಯ ಪದ್ಧತಿ ಮತ್ತು ಆಚರಣೆ ಕುರಿತು ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಧಾರಾಣಿ, ಎಸ್ಡಿಎಂಸಿ ಅಧ್ಯಕ್ಷೆ ಮಮತಾ, ಹಿರೇಕಬ್ಬಿಗೆರೆ ಗೊಲ್ಲರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಡಿ.ಮಂಜಣ್ಣ ಹಾಗೂ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮಕ್ಕಳು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ