Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯಗಳು ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣ: ಶಿವಪ್ರಿಯಾ ಕಡೇಚೂರ



ಬೆಳಗಾವಿ, ಜುಲೈ 31 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯದ ವಿದ್ಯಾರ್ಥಿಗಳಿಗೆ ಸರಕಾರವು ಗುಣಮಟ್ಟದ ಆಹಾರ, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ವ್ಯವಸ್ಥೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲವಾಗುವಂತೆ ಅತ್ಯುತ್ತಮ ಸೌಲಭ್ಯಗಳನ್ನು ನೀಡುತ್ತಿದೆ.‌ ಇವುಗಳನ್ನು ಸದ್ಬಳಕೆ‌ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.




ನಗರದ ಮಚ್ಚೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ನಿಲಯಗಳಿಗೆ ಬುಧವಾರ(ಜು.31) ಭೇಟಿ ನೀಡಿ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಮಾತನಾಡಿದರು.



ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಸಾಕಷ್ಟು ಬದಲಾವಣೆಗಳು ಮತ್ತು ಸುಧಾರಣೆಗಳಾಗಿವೆ.



ವಿದ್ಯಾರ್ಥಿಗಳಿಗೆ ಒಳ್ಳೆಯ ಗುಣಮಟ್ಟದ ಆಹಾರದೊಂದಿಗೆ ಎಲ್ಲ ಮೂಲಭೂತ ಸೌಕರ್ಯವನ್ನು ಒದಗಿಸಲಾಗಿರುತ್ತದೆ. ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳಿಗೆ ಸುಸುಜ್ಜಿತವಾದ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಸ್ಟಡಿ ಹಾಲ್ ,ಪೀಠೋಪಕರಣಗಳು ಇನ್ನಿತರ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಇದಲ್ಲದೇ ಮೆಟ್ರಿಕ್-ಪೂರ್ವ ವಿದ್ಯಾರ್ಥಿ ನಿಲಯದ ವಿದ್ಯಾಥಿಗಳಿಗೆ ಲೇಖನ ಸಾಮಗ್ರಿಗಳು ಹಾಗೂ ನೈಟ್ ಡ್ರೇಸ್ , ಟ್ರ್ಯಾಕ್ ಸೂಟ್ ಕೂಡ ನೀಡಲಾಗುತ್ತಿದೆ ಎಂದು ಶಿವಪ್ರಿಯಾ ವಿವರಿಸಿದರು.



ನಿಲಯದ ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಶಿವಪ್ರಿಯಾ ಕಡಾಎಚೂರ ಅವರು, ವಿದ್ಯಾರ್ಥಿಗಳಿಗೆ ಇಂದಿನ ಸ್ಥರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಯಾವ ರೀತಿಯಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂಬುದರ ಬಗ್ಗೆ ಸಲಹೆಗಳನ್ನು ನೀಡಿದರು.

ಜೊತೆಗೆ ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿ ನಡಿಸಬೇಕೆಂದು ಒಂದು ಕಾರ್ಯಾಗಾರವನ್ನು ಏರ್ಪಡಿಸುವ ಅಭಿಲಾಷೆಯನ್ನು ವ್ಯಕ್ತಪಡಿಸಿದರು.



ವಿದ್ಯಾರ್ಥಿ ನಿಲಯದಲ್ಲಿ ದಿನಪತ್ರಿಕೆಗಳು, ನಿಯತಕಾಲಿಕೆಗಳು, ಸ್ಪರ್ಧಾತ್ಮಕ ಮ್ಯಾಗಜಿನ್ ನಿಯಮಿತವಾಗಿ ಸರಬರಾಜು ಆಗುತ್ತಿರುವ ಬಗ್ಗೆ ವಿದ್ಯಾರ್ಥಿಗಳನ್ನು ವಿಚಾರಿಸಿ ಖಾತರಿಪಡಿಸಿಕೊಂಡರು.

ವಿದ್ಯಾರ್ಥಿಗಳಿಗೆ ಯಾವುದೇ ಅನಾನುಕೂಲ ಆಗದಂತೆ ಸರಕಾರ ನೀಡಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ನಿಲಯದ ಸಿಬ್ಬಂದಿಗೆ ಸೂಚನೆಯನ್ನು ನೀಡಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ