Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿ ಮಾರ್ಗದ ಮೂಲ-ಸಂವಿಧಾನ: ಕೆ.ಪಿ.ಮಂಜುನಾಥ ರೆಡ್ಡಿ

ಬಳ್ಳಾರಿ,ನ.26

ಭಾರತದ ಸಂವಿಧಾನವು ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವಾಗಿದ್ದು, ಸರ್ವ ಜನಾಂಗವು ಒಂದಾಗಿ ಬಾಳುವ ಸಂದೇಶ ನೀಡಿದ ಶಾಂತಿ ಮಾರ್ಗದ ಮೂಲವಾಗಿದೆ ಎಂದು ಬಾಲಕೀಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಪಿ.ಮಂಜುನಾಥ ರೆಡ್ಡಿ ಅವರು ಹೇಳಿದರು.
ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮತ್ತು ರಾಷ್ಟಿçÃಯ ಸೇವಾ ಯೋಜನೆ ಘಟಕ(ಎನ್‌ಎಸ್‌ಎಸ್) ಇವರ ಸಹಯೋಗದಲ್ಲಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂವಿಧಾನದ ಆಶಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಬದುಕಿದಾಗ ಸಮಾಜ ಸುಖಮಯವಾಗಿರುತ್ತದೆ ಎಂದರು.
ಇನ್ನೊರ್ವ ಉಪನ್ಯಾಸಕರಾದ ಶ್ಯಾಮಣ್ಣ ಅವರು ಮಾತನಾಡಿ, ಮನುಷ್ಯರನ್ನು ಮನುಷ್ಯರನ್ನಾಗಿ ಕಾಣುವಂತೆ ಮಾಡಿದ್ದು ಸಂವಿಧಾನ. ನಮ್ಮ ಸಂವಿಧಾನವು ಮಹಿಳೆಯರು, ತಳ ಸಮುದಾಯ, ನಿರ್ಲ್ಯಕ್ಷಿತ ಸಮುದಾಯಗಳ ಉದ್ದಾರದ ಜೊತೆಗೆ ಸರ್ವರೂ ಸಮನಾಗಿ ಬಾಳಬೇಕೆಂಬ ಧ್ಯೇಯದಿಂದ ಕೂಡಿದ್ದು, ಈ ಮೂಲಕ ಸಮರ್ಥ ರಾಷ್ಟçದ ನಿರ್ಮಾಣದಲ್ಲಿ ಸಂವಿಧಾನ ಮಹತ್ತರ ಪಾತ್ರವಹಿಸಲಿದೆ ಎಂದರು.
ರಾಜ್ಯಶಾಸ್ತçದ ಉಪನ್ಯಾಸಕ ಈರೇಶಪ್ಪ ಅವರು ಮಾತನಾಡಿ ಸಂವಿಧಾನದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಮೂಲಭೂತ ಹಕ್ಕು ನೀಡಿರುವುದರ ಜೊತೆಗೆ ಕರ್ತವ್ಯಗಳನ್ನೂ ನೀಡಿದೆ. ಸಾರ್ವಜನಿಕರು ಅವುಗಳ ಅರಿಯುವ ಅಗತ್ಯತೆ ಇದೆ ಎಂದರು.
ಸಂವಿಧಾನವು ಭಾರತೀಯರೆಲ್ಲರಿಗೂ ಪವಿತ್ರವಾದ ಗ್ರಂಥವಾಗಿದೆ. ಕೆಳವರ್ಗದ ಕೆಲಜನರಿಗೆ ಕನಸು ಕಾಣುವ ಅವಕಾಶವಿಲ್ಲದ ಕಾಲದಲ್ಲಿ ಸಂವಿಧಾನದ ಮೂಲಕ ವಾಸ್ತವತೆಯನ್ನು ಜನರಿಗೆ ಸಾಕಾರ ಮಾಡಿಕೊಳ್ಳಲು ಅವಕಾಶ ನೀಡಿದೆ ಎಂದರು.
ಇದೇ ವೇಳೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚಾನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂವಿಧಾನ ಪ್ರಸ್ತಾವನೆ ಭೋದಿಸಲಾಯಿತು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಹೆಚ್.ಎಂ.ಜ್ಯೋತಿ, ಡಾ.ಯು.ಶ್ರೀನಿವಾಸ ಮೂರ್ತಿ, ಚಾಂದ್‌ಪಾಷಾ, ರಾಘವೇಂದ್ರ, ನೆಹರು ಯುವ ಕೇಂದ್ರದ ಅಮರೇಶ್ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು