Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿ ಮಾರ್ಗದ ಮೂಲ-ಸಂವಿಧಾನ: ಕೆ.ಪಿ.ಮಂಜುನಾಥ ರೆಡ್ಡಿ

ಬಳ್ಳಾರಿ,ನ.26

ಭಾರತದ ಸಂವಿಧಾನವು ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವಾಗಿದ್ದು, ಸರ್ವ ಜನಾಂಗವು ಒಂದಾಗಿ ಬಾಳುವ ಸಂದೇಶ ನೀಡಿದ ಶಾಂತಿ ಮಾರ್ಗದ ಮೂಲವಾಗಿದೆ ಎಂದು ಬಾಲಕೀಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಪಿ.ಮಂಜುನಾಥ ರೆಡ್ಡಿ ಅವರು ಹೇಳಿದರು.
ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮತ್ತು ರಾಷ್ಟಿçÃಯ ಸೇವಾ ಯೋಜನೆ ಘಟಕ(ಎನ್‌ಎಸ್‌ಎಸ್) ಇವರ ಸಹಯೋಗದಲ್ಲಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂವಿಧಾನದ ಆಶಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಬದುಕಿದಾಗ ಸಮಾಜ ಸುಖಮಯವಾಗಿರುತ್ತದೆ ಎಂದರು.
ಇನ್ನೊರ್ವ ಉಪನ್ಯಾಸಕರಾದ ಶ್ಯಾಮಣ್ಣ ಅವರು ಮಾತನಾಡಿ, ಮನುಷ್ಯರನ್ನು ಮನುಷ್ಯರನ್ನಾಗಿ ಕಾಣುವಂತೆ ಮಾಡಿದ್ದು ಸಂವಿಧಾನ. ನಮ್ಮ ಸಂವಿಧಾನವು ಮಹಿಳೆಯರು, ತಳ ಸಮುದಾಯ, ನಿರ್ಲ್ಯಕ್ಷಿತ ಸಮುದಾಯಗಳ ಉದ್ದಾರದ ಜೊತೆಗೆ ಸರ್ವರೂ ಸಮನಾಗಿ ಬಾಳಬೇಕೆಂಬ ಧ್ಯೇಯದಿಂದ ಕೂಡಿದ್ದು, ಈ ಮೂಲಕ ಸಮರ್ಥ ರಾಷ್ಟçದ ನಿರ್ಮಾಣದಲ್ಲಿ ಸಂವಿಧಾನ ಮಹತ್ತರ ಪಾತ್ರವಹಿಸಲಿದೆ ಎಂದರು.
ರಾಜ್ಯಶಾಸ್ತçದ ಉಪನ್ಯಾಸಕ ಈರೇಶಪ್ಪ ಅವರು ಮಾತನಾಡಿ ಸಂವಿಧಾನದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಮೂಲಭೂತ ಹಕ್ಕು ನೀಡಿರುವುದರ ಜೊತೆಗೆ ಕರ್ತವ್ಯಗಳನ್ನೂ ನೀಡಿದೆ. ಸಾರ್ವಜನಿಕರು ಅವುಗಳ ಅರಿಯುವ ಅಗತ್ಯತೆ ಇದೆ ಎಂದರು.
ಸಂವಿಧಾನವು ಭಾರತೀಯರೆಲ್ಲರಿಗೂ ಪವಿತ್ರವಾದ ಗ್ರಂಥವಾಗಿದೆ. ಕೆಳವರ್ಗದ ಕೆಲಜನರಿಗೆ ಕನಸು ಕಾಣುವ ಅವಕಾಶವಿಲ್ಲದ ಕಾಲದಲ್ಲಿ ಸಂವಿಧಾನದ ಮೂಲಕ ವಾಸ್ತವತೆಯನ್ನು ಜನರಿಗೆ ಸಾಕಾರ ಮಾಡಿಕೊಳ್ಳಲು ಅವಕಾಶ ನೀಡಿದೆ ಎಂದರು.
ಇದೇ ವೇಳೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚಾನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂವಿಧಾನ ಪ್ರಸ್ತಾವನೆ ಭೋದಿಸಲಾಯಿತು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಹೆಚ್.ಎಂ.ಜ್ಯೋತಿ, ಡಾ.ಯು.ಶ್ರೀನಿವಾಸ ಮೂರ್ತಿ, ಚಾಂದ್‌ಪಾಷಾ, ರಾಘವೇಂದ್ರ, ನೆಹರು ಯುವ ಕೇಂದ್ರದ ಅಮರೇಶ್ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ