Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ನಾಗರಿಕ ರಕ್ಷಣಾ ಕಾರ್ಯಚರಣೆಯ ಅಣುಕು ಪ್ರದರ್ಶನ





ಬಳ್ಳಾರಿ,ಮೇ 17

ಪ್ರಸ್ತುತ ದೇಶದಲ್ಲಿ ಯುದ್ಧ ಸಂಭವಿಸುವ ವಿದ್ಯಮಾನಗಳನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರದ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಮುಂದೆ ಆಗಬಹುದಾದ ಎಲ್ಲಾ ರೀತಿಯ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತೆ ಮೂಡಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ವತಿಯಿಂದ ಅಪರೇಶನ್ ಅಭ್ಯಾಸ್ ಅಡಿ ನಾಗರಿಕ ರಕ್ಷಣಾ ಕಾರ್ಯಚರಣೆಯ ಅಣುಕು ಪ್ರದರ್ಶನವನ್ನು ಶನಿವಾರ ಸಂಡೂರಿನ ತೋರಣಗಲ್ಲು ಬಳಿಯ ಜೆಎಸ್‌ಡಬ್ಲೂö್ಯ ವಿಜಯನಗರ ಟೌನ್‌ಶಿಪ್ ನಲ್ಲಿ ಹಮ್ಮಿಕೊಳ್ಳಲಾಯಿತು.

ಅಣುಕು ಪ್ರದರ್ಶನದಲ್ಲಿ ನುರಿತ ಅಗ್ನಿಶಾಮಕ ಇಲಾಖೆ, ಪೋಲಿಸ್ ಇಲಾಖೆ ಹಾಗೂ ಜೆಎಸ್‌ಡಬ್ಲೂö್ಯ ನ ಕ್ಯೂಆರ್‌ಟಿ, ಸಂಶೋಧನಾ ಮತ್ತು ರಕ್ಷಣೆ, ವಿಮಾನ ನಿಲ್ದಾಣ ಭದ್ರತಾ ತಂಡ, ಶ್ವಾನದಳ, ಅಗ್ನಿಶಾಮಕ ದಳದ ತಂಡ ಮತ್ತು ಇತರೆ ತಂಡ ಒಳಗೊಂಡoತೆ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿಗಳು ಅಣುಕು ಪ್ರದರ್ಶನ ನಡೆಸಿಕೊಟ್ಟರು.

ಅಣಕು ಪ್ರದರ್ಶನದಲ್ಲಿ ಅನಾಹುತ ಸಂಭವಿಸಿದಲ್ಲಿ ಕೈಗೊಳ್ಳಬಹುದಾದ ಪ್ರಥಮ ಚಿಕಿತ್ಸಾ ಕಾರ್ಯ, ಸುರಕ್ಷಿತ ಸ್ಥಳದಲ್ಲಿ ಅಡಗುವಿಕೆ, ಶ್ವಾನಗಳ ಕಾರ್ಯಾಚರಣೆ ಹಾಗೂ ಇತರೆ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಯಪಡಿಸಲಾಯಿತು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪಿ.ಪ್ರಮೋದ್, ತೋರಣಗಲ್ಲು ವಿಭಾಗ ಡಿ.ಎಸ್.ಪಿ ಪ್ರಸಾದ್ ಗೋಖಲೆ ಸೇರಿದಂತೆ ಆರೋಗ್ಯ ಇಲಾಖೆ, ಕಾರ್ಖಾನೆಗಳು ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥö್ಯ ಇಲಾಖೆ, ಗೃಹ ರಕ್ಷಕದಳ ಅಧಿಕಾರಿಗಳು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಮತ್ತು ಸಾರ್ವಜನಿಕರು ಹಾಜರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ