Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಮಹಾನಗರ ಪಾಲಿಕೆ; ಬೃಹತ್ ತ್ಯಾಜ್ಯೋತ್ಪಾದಕರಿಗೆ ಸೂಚನೆ

ಬಳ್ಳಾರಿ,ಜೂ.27

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಪಾಲಿಕೆಯು ಸೂಚನೆ ನೀಡಿದ್ದು, ಬೃಹತ್ ಘನತ್ಯಾಜ್ಯೋತ್ಪಾದಕರು ದಿನವೊಂದಕ್ಕೆ 100 ಕೆಜಿ ಅಥವಾ ಅದಕ್ಕೂ ಹೆಚ್ಚಿನ ಘನತ್ಯಾಜ್ಯವನ್ನು ಉತ್ಪಾದಿಸುವಂತಹ ಉತ್ಪಾದಕರುಗಳು ಘನತ್ಯಾಜ್ಯ ನಿರ್ವಹಣಾ ಕರ್ತವ್ಯಗಳನ್ನು ತಾವೇ ನಿರ್ವಹಿಸಬೇಕು ಎಂದು ಪಾಲಿಕೆಯು ತಿಳಿಸಿದೆ.

ಘನತ್ಯಾಜ್ಯವನ್ನು ಮೂರು ವರ್ಗಗಳಾಗಿ ವಿಂಗಡಿಸಲಾಗಿದ್ದು, ಅದರಲ್ಲಿ ಕೊಳೆಯಬಹುದಾದ ಜೈವಿಕ ತ್ಯಾಜ್ಯ, ಕೊಳೆಯಲಾರದಂತಹ ಜೈವಿಕ ರಹಿತ ತ್ಯಾಜ್ಯ, ಗೃಹೋತ್ಪಾದಕ ಹಾನಿಕಾರಕ ತ್ಯಾಜ್ಯ ಮೂಲದಲ್ಲಿಯೇ ವಿಂಗಡಿಸುವುದು ಒಳಗೊಂಡಂತೆ ಮತ್ತು ಕೊಳೆಯಬಹುದಾದ ಜೈವಿಕ ತ್ಯಾಜ್ಯಗಳ ಸಂಸ್ಕರಣಾ ಮತ್ತು ಔಪಚಾರಿಕ ವ್ಯವಸ್ಠೆಯನ್ನು ಪ್ರಕಟಣೆಗೊಂಡ 30 ದಿನಗಳೊಳಗಾಗಿ ತಮ್ಮ ಸಂಕೀರ್ಣ, ಆವರಣಗಳಲ್ಲಿ ಅನುಷ್ಟಾನಗೊಳಿಸಬೇಕು ಎಂದು ಮಹಾನಗರ ಪಾಲಿಕೆ ನಿರ್ದೇಶಿಸಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿ ಬೃಹತ್ ತ್ಯಾಜ್ಯೋತ್ಪಾದಕರು ಪ್ರತಿ ದಿನವೊಂದಕ್ಕೆ ತಮ್ಮ ಆವರಣದಿಂದ 100 ಕೆಜಿಗಿಂತ ಕಡಿಮೆ ತ್ಯಾಜ್ಯವನ್ನು ಉತ್ಪಾದಿಸುತ್ತಿರುವರೆಂದು ಸ್ವಯಂ ಘೋಷಣೆ ಪತ್ರವನ್ನು ಜುಲೈ 25 ರೊಳಗಾಗಿ ಪಾಲಿಕೆಗೆ ಸಲ್ಲಿಸಬೇಕು. ನಂತರ ಸಲ್ಲಿಸಲಾಗುವ ಸ್ವಯಂ ಘೋóಷಣೆ ಪತ್ರವನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗುವುದು.

ಸ್ವಯಂ ಘೋಷಣೆಯು ಪರಿಶೀಲನೆಗೆ ಒಳಪಡಿಸಲಾಗುತ್ತದೆ ಮತ್ತು ಅದೇ ರೀತಿಯಲ್ಲಿಯೇ ವರ್ಗೀಕರಿಸಲಾಗುವುದು. ಒಂದು ವೇಳೆ ಸುಳ್ಳು ಎಂದು ಕಂಡು ಬಂದರೆ ದಂಡ ವಿಧಿಸಲಾಗುವುದು.

ಸಾರ್ವಜನಿಕರು ವಿವರವಾದ ಸೂಚನೆಗಳು ಹಾಗೂ ಮಾಹಿತಿಗಾಗಿ http://www.ballaricity.mrc.gov.in/ ವೆಬ್ಸೈಟ್ಗೆ ಭೇಟಿ ನೀಡಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ