Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ರಾಘವರು ಶ್ರೇಷ್ಠ ಮಾನವತಾವಾದಿ: ಸಿದ್ದರಾಮ ಕಲ್ಮಠ

ಮಹಾನ್ ನಟರಾಗಿದ್ದ ರಾಘವರು ನೂರಾರು ನಾಟಕಗಳಲ್ಲಿ ತಮ್ಮ ಅಭಿನಯ,ಸಂಭಾಷಣೆಯಿಂದ ದೇಶಾದ್ಯಂತ ಅಸಂಖ್ಯಾತ ಜನರ ಅಭಿಮಾನ ಪ್ರೀತಿಯನ್ನು ಗಳಿಸಿದ್ದರೆಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಕುಲಸಚಿವ ಸಿ .ನಾಗರಾಜ್ ರವರು ಹೇಳಿದರು.

ಅವರು ರಾಘವ ಕಲಾ ಮಂದಿರದಲ್ಲಿ

ರಾಘವ ಮೆಮೋರಿಯಲ್ ಅಸೋಸಿಯೇಷನ್(ರಿ) ಇವರು ಆಯೋಜಿಸಿದ್ದ ನಾಟ್ಯಕಲಾ ಪ್ರಪೂರ್ಣ ಬಳ್ಳಾರಿ ರಾಘವರ 145ನೇ ಜಯಂತಿ ಅಂಗವಾಗಿ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ,ಪುಸ್ತಕ ಬಿಡುಗಡೆ, ನಾಟಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

 ಅವರು ರಾಘವರ ಬಾಲ್ಯ,ರಂಗಾಸಕ್ತಿ,ನಾಟಕ ರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿ ರಂಗಭೂಮಿ ಕ್ಷೇತ್ರಕ್ಕೆ ಅವರದು ಅಮೂಲ್ಯ ಕೊಡುಗೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ,ಲೇಖಕ ಸಿದ್ದರಾಮ ಕಲ್ಮಠ ಮಾತನಾಡಿ, ಭಾರತೀಯ ರಂಗಭೂಮಿ ಕಂಡ ಧೀಮಂತ ನಟ ಬಳ್ಳಾರಿ ರಾಘವರು.ಅವರು ತಮ್ಮ ಹೊಸ ಅಲೆಯ ನಾಟಕಗಳಿಂದ ಅಂದಿನ ರಂಗಭೂಮಿಗೆ ಆಧುನಿಕತೆಯ ಸ್ಪರ್ಶ ನೀಡಿದರು.ಕನ್ನಡ ,ತೆಲುಗು ನಾಟಕಗಳಲ್ಲಿ ಅನೇಕ ಬದಲಾವಣೆಗಳಾದವು.ಅವರೊಬ್ಬ ಬಹುಭಾಷೆಗಳ ನಟ.ನಾಟಕಕಾರ,ನಿರ್ದೇಶಕ, ವೃತ್ತಿಯಲ್ಲಿ ವಕೀಲರಾಗಿದ್ದರೂ ಸಮಾಜಸುಧಾರಣೆಗೆ ನಾಟಕಗಳು ಮುಖ್ಯವೆಂದು ಭಾವಿಸಿದರು.ಅವರು ನಾಟಕಗಳು ಸಮಕಾಲೀನ ಸಮಾಜವನ್ನು ಪ್ರತಿಬಿಂಬಿಸಬೇಕು ಎಂದು ಹೇಳಿದ್ದರು ಎಂದು ಅಭಿಪ್ರಾಯಪಟ್ಟರು.

ಸಹೃದಯರಾಗಿದ್ದ ರಾಘವರು ಕಲಾವಿದನಿಗೆ ಯಾವ ಭಾಷೆ,ಧರ್ಮ,ಮತದ ಭೇದವಿಲ್ಲ,ರಂಗಭೂಮಿಯಿಂದ ಸಮಾನತೆಯ ಸಮಾಜ ಕಟ್ಟಬಹುದೆಂದು ಕನಸು ಕಂಡಿದ್ದ ರಾಘವರು ಶ್ರೇಷ್ಠ ಮಾನವತಾವಾದಿ ಎಂದು ಹೇಳಿದರು. ಅಧ್ಯಕ್ಷತೆವಹಿಸಿದ್ದ ಅಸೋಸಿಯೇಷನ್ ನ ಗೌರವಾಧ್ಯಕ್ಷ ಕೆ.ಚನ್ನಪ್ಪ ಅವರು ಸಿದ್ದರಾಮ ಕಲ್ಮಠ ರಚಿಸಿದ " ರಂಗಭೂಮಿಯ ಅನರ್ಘ್ಯ ರತ್ನ ಬಳ್ಳಾರಿ ರಾಘವ " ಕೃತಿ ಬಿಡುಗಡೆ ಮಾಡಿದರು.ಅವರು ರಾಘವರ ಆದರ್ಶ ರಂಗ ಪರಂಪರೆಯನ್ನು ಉಳಿಸಿ ಬೆಳೆಸೋಣ ಎಂದರು.

ವೇದಿಕೆ ಮೇಲೆ ಅಸೋಸಿಯೇಷನ್ ಅಧ್ಯಕ್ಷ ಕೆ ಕೋಟೇಶ್ವರರಾವ್, ಉಪಾಧ್ಯಕ್ಷ ರಮೇಶ್ ಗೌಡ ಪಾಟೀಲ್, ಹೆಚ್ ವಿಷ್ಣುವರ್ಧನ ರೆಡ್ಡಿ ಕಾರ್ಯದರ್ಶಿ ಎನ್. ಪ್ರಕಾಶ್, ಖಜಾಂಜಿ ಈ. ಧನಂಜಯ ,ಜಂಟಿ ಕಾರ್ಯದರ್ಶಿ ಎಂ. ರಾಮಾಂಜನೇಯಲು ಉಪಸ್ಥಿತರಿದ್ದರು.

ಈ ಸಾಲಿನ ರಾಜ್ಯಮಟ್ಟದ "ಬಳ್ಳಾರಿ ರಾಘವ" ಪ್ರಶಸ್ತಿಯನ್ನುರಂಗಭೂಮಿ,ಚಲನಚಿತ್ರ ನಟ ಶ್ರೀ ಡಿಂಗ್ರಿ ನಾಗರಾಜ ರವರಿಗೆ ನೀಡಿ ಗೌರವಿಸಲಾಯಿತು.

ನಂತರ ಧಾರವಾಡದ ಕಲಾಸಂಗಮ ಸಂಸ್ಥೆಯಿಂದ ವೀರೇಶ ಬಳಗಾಲಪೇಟ್ ರಚನೆಯ ಪ್ರಭು ಹಂಚಿನಾಳ ನಿರ್ದೇಶನದ "ಸಮರಸಿಂಹ ಸಂಗೊಳ್ಳಿ ರಾಯಣ್ಣ" ಕನ್ನಡ ಐತಿಹಾಸಿಕ ನಾಟಕವನ್ನು ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀಮತಿ ಕೋಲಾಚಲಂ ಸಂಧ್ಯಾ ಪ್ರಾರ್ಥಸಿದರು. ಕೆ ಕೋಟೇಶ್ವರರಾವ್ ಸ್ಚಾಗತಿಸಿದರು.ಎಂ. ರಾಮಾಂಜನೇಯಲು ವಂದಿಸಿದರು. ವಿಷ್ಣು ಹಡಪದ ನಿರೂಪಿಸಿದರು.ರಮಣಪ್ಪ ಭಜಂತ್ರಿ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ನೂರಾರು ಕಲಾಭಿಮಾನಿಗಳು ಪಾಲ್ಗೊಂಡಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು