Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾಗ್ಯಲಕ್ಷ್ಮೀ ಬಾಂಡ್ ನೋಂದಣಿ ಹಾಗೂ ಪರಿಪಕ್ವ ಮೊತ್ತ ಪಾವತಿ: ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸಲು ಸೂಚನೆ


ಚಿತ್ರದುರ್ಗಮಾ.07:

ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯು 2006-07ನೇ ಸಾಲಿನಿಂದ ಜಾರಿಯಾಗಿದ್ದು, ಪ್ರಸ್ತುತ ನೋಂದಣಿ ಜಾರಿಯಲ್ಲಿದ್ದು, ಈಗಾಗಲೇ ನೋಂದಣಿಯಾಗಿ ಸೌಲಭ್ಯ ಪಡೆದಿರುವ ಫಲಾನುಭವಿಗಳಿಗೆ 2024-25ನೇ ಸಾಲಿನಿಂದ ಪರಿಪಕ್ವ ಮೊತ್ತ ಒದಗಿಸಬೇಕಾಗಿರುತ್ತದೆ.

ಪರಿಪಕ್ವ ಮೊತ್ತ ಒದಗಿಸಲು ಹಾಗೂ ಹೊಸದಾಗಿ ಭಾಗ್ಯಲಕ್ಷ್ಮೀ ಬಾಂಡ್ (ಸುಕನ್ಯ ಸಮೃದ್ಧಿ ಯೋಜನೆ) ಪಡೆಯುವ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದಾಗಿದೆ.

ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯಡಿ ನೋಂದಣಿಯಾಗಿರುವ ಎಲ್ಲಾ ಫಲಾನುಭವಿಗಳಿಗೆ, ಸಾರ್ವಜನಿಕರ ಗಮನಕ್ಕೆ ತರಬಯಸುವುದೆನೆಂದರೆ ಈ ಯೋಜನೆಯು ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ನೋಂದಣಿ ಹಾಗೂ ಪರಿಪಕ್ವ ಮೊತ್ತ ಪಾವತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಯಾವುದೇ ತಾಲ್ಲೂಕು ಕಛೇರಿಗಳಲ್ಲಿ ಮದ್ಯವರ್ತಿಗಳಾಗಲೀ ಅಥವಾ ಸಿಬ್ಬಂದಿಗಳಾಗಲೀ ಹಣ ಕೇಳಿದಲ್ಲಿ ನೇರವಾಗಿ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448566058, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448873683, ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9945888425, ಹಿರಿಯೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-7892661086, ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9481182921, ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -8867404421, ಮೊಳಕಾಲ್ಕೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -7353002417, ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು- 9480500575 ಅವರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು