Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಜಿಲ್ಲೆಯ ಗ್ರಂಥಾಲಯಗಳಲ್ಲಿ ಪುಸ್ತಕ ಪ್ರದರ್ಶನ


ಕೊಪ್ಪಳ ನವೆಂಬರ್ 15: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ಕೊಪ್ಪಳ ನಗರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಶುಕ್ರವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಯಿತು.

ನಗರದ ಎನ್.ಜಿ.ಓ ಕಾಲೋನಿಯಲ್ಲಿನ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಆಚರಿಸಲಾಯಿತು. ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರಪ್ಪ ವಟಪರವಿ ಅವರು ಉದ್ಘಾಟಿಸಿ 14ನೇ ನವಂಬರ್ 1919 ಭಾರತೀಯ ಗ್ರಂಥಾಲಯ ಚಳುವಳಿಯಲ್ಲಿಯೇ ಮಹತ್ವದ ದಿನ. ಅಖಿಲ ಭಾರತ ಸಾರ್ವಜನಿಕ ಗ್ರಂಥಾಲಯ ಸಮ್ಮೇಳನವನ್ನು ಅಂದಿನ ಮದ್ರಾಸ್ ಇಂದಿನ ಚೆನೈ ಗೋಖಲೆ ಭವನದಲ್ಲಿ ಬರೋಡದ ಗ್ರಂಥಾಲಯದ ನಿರ್ದೇಶಕರಾದ ದಿವಂಗತ ಜೆ.ಎಸ್.ಕುಟಾಲ್ಕರ್ ಅವರು ನೇರವೇರಿಸಿದರು. ಇದರಷ್ಟೇ ಮುಖ್ಯ ವೆನಿಸುವ ಪುಸ್ತಕ ಪ್ರಿಯರು ಹಾಗೂ ಮಕ್ಕಳ ನೆಚ್ಚಿನ ಚಾಚಾ ಆಗಿದ್ದ ಜವಾಹರಲಾಲ್ ನೆಹರೂ ಅವರು ಜನ್ಮದಿನವೂ ಆಗಿದ್ದೂ ಆ ದಿನದಿಂದಲೇ ಒಂದು ವಾರಗಳ ಕಾಲ ಸಪ್ತಾಹವನ್ನು ಆಚರಿಸಲು ನಿರ್ಧರಿಸಿ 1968 ರಿಂದ ನವಂಬರ್ 14 ರಿಂದ 20 ರವರೆಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಂಥಾಲಯ ಸಹಾಯಕ ನಾಗರಾಜನಾಯಕ ಡೊಳ್ಳಿನ ಸಾರ್ವಜನಿಕ ಗ್ರಂಥಾಲಯಗಳನ್ನು ಓದುಗರು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕೊಪ್ಪಳದ ಗಣೇಶ ನಗರ ಗ್ರಂಥಾಲಯ, ಅಶೋಕ ಸರ್ಕಲ್ ಹತ್ತಿರದ ಸಾಹಿತ್ಯ ಭವನದ ಹಿಂಭಾಗದ ಗ್ರಂಥಾಲಯ, ಕುಷ್ಟಗಿ ಶಾಖಾ ಗ್ರಂಥಾಲಯ, ಮುನಿರಾಬಾದ ಶಾಖಾ ಗ್ರಂಥಾಲಯ, ಗಂಗಾವತಿ ಶಾಖಾ ಗ್ರಂಥಾಲಯ, ಕುಕನೂರು ಶಾಖಾ ಗ್ರಂಥಾಲಯ, ಯಲಬುರ್ಗಾ ಶಾಖಾ ಗ್ರಂಥಾಲಯ, ಇಟಗಿ ಶಾಖಾ ಗ್ರಂಥಾಲಯ ಸೇರಿದಂತೆ ಜಿಲ್ಲೆಯ ವಿವಿಧ ಗ್ರಂಥಾಲಯಗಳಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಓದುಗರೊಂದಿಗೆ ಜರುಗಿತು.ಸಪ್ತಾಹ ನಿಮಿತ್ಯ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಪುಸ್ತಕ ಪ್ರದರ್ಶನದಲ್ಲಿ ಕಿಟ್ಟಲ್ ರ ನಿಘಂಟು, ಕನ್ನಡದ ಶ್ರೇಷ್ಠ ಕೃತಿಗಳಾದ ಮಲೆಗಳಲ್ಲಿ ಮದುಮಗಳು, ಮೂಕಜ್ಜಿಯ ಕನಸುಗಳು, ಭಾರತ ಸಿಂಧು ರಶ್ಮಿ, ಕಾನೂರು ಹೆಗ್ಗಡಿತಿ, ಮನೋರಮಾ ಇಯರ್ ಬುಕ್, ಶಿವರಾಮ ಕಾರಂತ ಅವರ ಬಾಲ ಪ್ರಪಂಚ ಸಂಪುಟ, ಮಾಸ್ತಿ ಸಂಪುಟ, ಎದೆಯ ಹಣತೆ, ಎದೆಗೆ ಬಿದ್ದ ಅಕ್ಷರ, ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಧಿಸಿದ ಪುಸ್ತಕಗಳನ್ನು ಇರಿಸಲಾಗಿತ್ತು.

ಗಣೇಶ ನಗರ ಶಾಖೆಯ ಗ್ರಂಥಾಲಯ ಸಹಾಯಕಿ ವಿಜಯಲಕ್ಷ್ಮೀ ವಡ್ಡಟ್ಟಿ, ಗಂಗಾವತಿ ಶಾಖೆಯ ಸಹಾಯಕ ಗ್ರಂಥಪಾಲಕ ಕೊಟ್ರಪ್ಪ.ಬಿ, ಮುಖ್ಯ ಗ್ರಂಥಾಲಯಾಧಿಕಾರಿ ಕಛೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಉಮಾ ಹಳ್ಯಾಳ, ದ್ವಿತೀಯ ದರ್ಜೆ ಸಹಾಯಕಿ ರಾಜೇಶ್ವರಿ ಸೇರಿದಂತೆ ಓದುಗರು ಮತ್ತಿತರರು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ