Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ


ಬಳ್ಳಾರಿ,ಮಾ.27

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರು ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ವಿವಿಧ ವೃತ್ತಿಪರ ತರಬೇತಿಗಳಿಗೆ ಅರ್ಜಿ ಆಹ್ವಾನಿಸಿದೆ.

ಗ್ರಾಮೀಣ ಪ್ರದೇಶದ 19 ರಿಂದ 45 ವರ್ಷ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ತರಬೇತಿಗಳನ್ನು ಆಯೋಜಿಸಲಾಗಿದೆ.

*ತರಬೇತಿಗಳ ವಿವರ:*

ಏ.06 ರಿಂದ ಮೊಬೈಲ್ ಸರ್ವಿಸಿಂಗ್ ತರಬೇತಿ (30 ದಿನ).

ಏ.09 ರಿಂದ ಕೃತಕ ಆಭರಣ ತಯಾರಿಕೆ ತರಬೇತಿ (14 ದಿನ).

ಏ.15 ರಿಂದ ಕೃಷಿ ಉದ್ಯಮಿ ತರಬೇತಿ (13 ದಿನ).

ಏ.14 ರಿಂದ ಅಗರಬತ್ತಿ ತಯಾರಿಕೆ ತರಬೇತಿ (12 ದಿನ).

ಮೇ 04 ರಿಂದ ಮೋಟಾರ್ ರಿವೈಂಡಿAಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿ (30 ದಿನ).

ಮೇ 18 ರಿಂದ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ (30 ದಿನ).

ಮೇ 25 ರಿಂದ ಫಾಸ್ಟ್ ಫುಡ್ ತಯಾರಿಕೆ ತರಬೇತಿ (14 ದಿನ).

ಜೂ.04 ರಿಂದ ಬ್ಯೂಟಿ ಪಾರ್ಲರ್ ತರಬೇತಿ (35 ದಿನ).

ತರಬೇತಿಗೆ ಸೇರಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ತೇರ್ಗಡೆಯಾಗಿರಬೇಕು. ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ಪ್ರತಿ, ಉದ್ಯೋಗ ಖಾತ್ರಿ ಕಾರ್ಡ್, 3 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಡಿ.ಐ.ಸಿ ಕಾಂಪೌAಡ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರ, ಹೊಸಪೇಟೆ ರಸ್ತೆ, ಬಳ್ಳಾರಿ. ದೂ.08392-299117, ಮೊ.9449860659, 9008464120, 9980123603 ಗೆ ಸಂಪರ್ಕಿಸಬಹುದು.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ