Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಘನ, ದ್ರವ ತ್ಯಾಜ್ಯ ನಿರ್ವಹಣೆ: ನಿಯಮ ಪಾಲನೆಗೆ ಜಿಲ್ಲಾಧಿಕಾರಿಗಳ ಸೂಚನೆ

ಹೊಸಪೇಟೆ (ವಿಜಯನಗರ) ಮೇ 15 : ಘನತ್ಯಾಜ್ಯ ವಸ್ತು ವಿಲೇವಾರಿ ಕುರಿತಂತೆ ರಾಷ್ಟ್ರಿಯ ಹಸಿರು ನ್ಯಾಯಾಧೀಕರಣ ಪೀಠದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ:06/2018ರಲ್ಲಿ ನಗರ ಸ್ಥಳೀಯ ಸಂಸ್ಥೆಗಳು ರಾಷ್ಟ್ರಿಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳ ಪಾಲನೆ ಮಾಡುವ ವಿಷಯದ ಕುರಿತು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳು, ಪರಿಸರ ಇಲಾಖೆ ಮತ್ತು ಜಿಲ್ಲಾ ವಾಯುಮಾಲಿನ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ರಾಷ್ಟ್ರಿಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳ ಪಾಲನೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಘನ ಘನತ್ಯಾಜ್ಯ ನಿರ್ವಹಣೆ, ಪಾರಂಪರಿಕ ತ್ಯಾಜ್ಯ ನಿರ್ವಹಣೆ, ದ್ರವ ತ್ಯಾಜ್ಯ ನಿರ್ವಹಣೆಯ ಬಗ್ಗೆ ಮಾನ್ಯ ರಾಷ್ಟ್ರಿಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳನ್ನು ಪಾಲಿಸುವ ಸಂಬAಧ ನ್ಯಾಯಾಧೀಕರಣಕ್ಕೆ ಸಲ್ಲಿಸಿರುವ ಅಫಿಡೇವಿಟ್‌ನಲ್ಲಿನ ಅಂಶಗಳನ್ನು ನಿಗದಿತ ಸಮಯದೊಳಗೆ ಕಾರ್ಯಗತಗೊಳಿಸುವಲ್ಲಿ ನಿರ್ಲಕ್ಷತನ ತೋರಿದಲ್ಲಿ ಅಂತವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ್, ನಗರಸಭೆಯ ಪೌರಾಯುಕ್ತರು, ಕಾರ್ಯಪಾಲಕ ಅಭಿಯಂತರರಾದ ನಾಗರಾಜ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೀರೇಶ್, ಶಿಲ್ಪಾಶ್ರೀ ಹಾಗೂ ಪರಿಸರ ಅಭಿಯಂತರರಾದ ಜಗದೀಶ್ ಮತ್ತು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ