Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ಲಾಟ್ ಖರೀದಿಸಲು ಕೊಟ್ಟ ಹಣವನ್ನು ಮರಳಿ ಗ್ರಾಹಕನಿಗೆ ಕೊಡಲು ಪ್ರುತ್ವಿ ಬಿಲ್ಡರ್ಸ್ ಮತ್ತು ಡೆವಲಪರ್ಸ್‍ಗೆ ಆಯೋಗದ ಆದೇಶ



ಧಾರವಾಡ  ಜು.2: ಬೆಂಗಳೂರಿನ ಯಳಚೆನಹಳ್ಳಿಯ ನಿವಾಸಿ ಪರಶುರಾಮ ಬಿ ಹಾಗೂ ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿ ಸಂದ್ಯಾ ಮೇತ್ರಾಣಿ ಎಂಬುವವರು ಎದುರುದಾರರು ಅಭಿವೃದ್ದಿಪಡಿಸುತ್ತಿರುವ ಗಾಮನಗಟ್ಟಿ ಲೇಔಟ್ನಲ್ಲಿ ಪ್ಲಾಟ್ ನಂ.53 ಮತ್ತು ಪ್ಲಾಟ್ ನಂ.17ನ್ನು ಖರೀದಿಸುವ ಸಲುವಾಗಿ ಮುಂಗಡ ಹಣ ಪಾವತಿಸಿ ಖರೀದಿ ಕರಾರು ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ಬಾಕಿ ಹಣ ಪಡೆದು ಎದುರುದಾರರು ಖರೀದಿ ಪತ್ರ ಮಾಡಿಕೊಡದೇ ದೂರುದಾರರಿಗೆ ಸತಾಯಿಸುತ್ತಿದ್ದರು. ಅಲ್ಲದೆ ದೂರುದಾರರ ಪಾವತಿ ಮಾಡಿದ ಹಣವನ್ನು ಸಹ ಮರಳಿ ಕೊಟ್ಟಿರಲಿಲ್ಲ. ಎದುರುದಾರರ ಅಂತಹ ನಡಾವಳಿಕೆಯಿಂದ ಅವರು ತಮಗೆ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿದ್ದಾರೆಂದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ:01/02/2025 ರಂದು ದೂರು ಸಲ್ಲಿಸಿದ್ದರು.



ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿ.ಅ. ಬೋಳಶೆಟ್ಟಿ ಸದಸ್ಯರು ದೂರುದಾರರಿಂದ ಮುಂಗಡವಾಗಿ ಪಡೆದ ಹಣವನ್ನು ಡೆವಲಪರ್ ತಮ್ಮ ವೈಯಕ್ತಿಕ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡು ಅವರಿಗೆ ಪ್ಲಾಟನ್ನು ಕೊಡದೇ ಇರುವುದು ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಆಯೋಗ ಅಭಿಪ್ರಾಯಪಟ್ಟಿದೆ. ಆ ಬಗ್ಗೆ ಎದುರುದಾರರ ಮಾಲೀಕರಾದ ಶಿವನಗೌಡ ಪಾಟೀಲ ಇವರಿಗೆ ದೂರುದಾರರಿಂದ ಪಡೆದಂತಹ ಮುಂಗಡ ಹಣ ಬಡ್ಡಿ ಲೆಕ್ಕಿ ಹಾಕಿ ಸಂದಾಯ ಮಾಡುವಂತೆ ಆದೇಶಿಸಿದೆ. ಜೊತೆಗೆ ಸೇವಾ ನ್ಯೂನ್ಯತೆಯಿಂದ ದೂರುದಾರರಿಗೆ ಆಗಿರುವ ತೊಂದರೆ ಹಾಗೂ ಮಾನಸಿಕ ಹಿಂಸೆಗೆ ತಲಾ ರೂ.50,000 ಪರಿಹಾರ ಹಾಗೂ ತಲಾ ರೂ.10,000 ಪ್ರಕರಣದ ಖರ್ಚು ವೆಚ್ಚ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಎದುರುದಾರರಿಗೆ ಆಯೋಗ ಆದೇಶಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ