Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೊಂದಲ ಗೂಡಾದ ವಸತಿ ಶಾಲೆಗಳ ಸೀಟು ಹಂಚಿಕೆ : ಸಾರ್ವಜನಿಕರ ಪರದಾಟ ವಿದ್ಯಾರ್ಥಿಗಳ ಸಂಕಟ

ಮೊರಾರ್ಜಿ ದೇಸಾಯಿ, ಗಾಂಧಿ ತತ್ವ, ನವೋದಯ ಸೇರಿದಂತೆ ಕೇಂದ್ರ ಸರ್ಕಾರಿ ಸ್ವಾಮ್ಯದ ವಸತಿ ಶಾಲೆಗಳಿಗೆ ಪ್ರವೇಶವನ್ನು ಬಯಸಿ ನೂರಾರು ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು, ಅಷ್ಟೇ ಅಲ್ಲದೆ 6, 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳು ವರ್ಗಾವಣೆಯನ್ನು ಬಯಸಿ ಹಲವಾರು ಅರ್ಜಿಗಳನ್ನು ಆಯಾ ಮುಖ್ಯ ಉಪಾಧ್ಯಾಯರಲ್ಲಿ ಸಲ್ಲಿಸಿಕೊಂಡಿದ್ದು ಅವುಗಳನ್ನು ಇಂದು ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸುವ ಮೂಲಕ ಇತ್ಯರ್ಥಪಡಿಸಲಾಯಿತು. 


 ಆದರೆ ಈ ವಿದ್ಯಾರ್ಥಿಗಳ ಅರ್ಜಿಗಳನ್ನು ಇಂದು ಇತ್ಯರ್ಥಪಡಿಸದೆ ಮತ್ತೆ ಮುಂದಿನ ವಾರಕ್ಕೆ ಸಭೆಯನ್ನು ಮುಂದೂಡಿರುವುದಾಗಿ ಸಾಯಕ ಆಯುಕ್ತರು ಸಭೆಯನ್ನು ಮುಕ್ತಾಯಗೊಳಿಸಿದರು. ಇದರಿಂದ ಸಹಾಯಕ ಆಯುಕ್ತರ ಕಚೇರಿಗೆ ಬಂದಿದ್ದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಗೊಂದಲದಿಂದ ಮರಳಿದರು. 


 ಹೀಗೆ ಪದೇ ಪದೇ ಹಲವಾರು ಸಲ ಕಚೇರಿಗೆ ಅಲೆದಾಡಿಸುತ್ತಿರುವ ಪ್ರಾಂಶುಪಾಲರು ಮತ್ತು ಸಂಬಂಧಿಸಿದ ಅಧಿಕಾರಿಗಳನ್ನು ಪೋಷಕರು ತರಾಟೆಗೆ ತೆಗೆದುಕೊಂಡರು. ದಲಿತ ಮುಖಂಡರು ಮತ್ತು ಹಿರಿಯ ಪತ್ರಕರ್ತರಾದ ಚಳ್ಳಗುರ್ಕಿ ಸೋಮಶೇಖರ್ ಅವರು ಹೀಗೆ ಪದೇ ಪದೇ ವಿದ್ಯಾರ್ಥಿಗಳನ್ನು ಮತ್ತು ಪೋಷಕರ ಕಚೇರಿಗೆ ಅಲೆದಾಟ ತಪ್ಪಿಸುವಂತೆ ವಸತಿ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಪ್ರಾಂಶುಪಾಲರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡು ಕೂಡಲೇ ಪ್ರವೇಶ ಮತ್ತು ವರ್ಗಾವಣೆಯ ಸಮಸ್ಯೆಯನ್ನು ಪರಿಹರಿಸಬೇಕೆಂದು ಒತ್ತಾಯಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ