Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಟ್ಟೂರಿನಲ್ಲಿ ಶೀಘ್ರವೇ ನ್ಯಾಯಾಲಯ ಆರಂಭ

ಕೊಟ್ಟೂರು: ಇಲ್ಲಿನ  ಪಟ್ಟಣ ಪಂಚಾಯ್ತಿ ಆವರಣದಲ್ಲಿರುವ ಬಾಲಭವನ ಕಟ್ಟಡದ ನವೀಕರಣ ಕಾರ್ಯ ಪೂರ್ಣಗೊಳ್ಳುತ್ತಿದ್ದಂತೆ ನ್ಯಾಯಾಲಯದ ಆರಂಭಕ್ಕೆ ಅನುಮತಿ ನೀಡಲಾಗುವುದು ಎಂದು ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ವಿಜಯನಗರ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ್ ಯೆರೂರ್ ಹೇಳಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ. ರಾಜಶೇಖರ್ , ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಹಾಗೂ ಕೂಡ್ಲಿಗಿ ಹಿರಿಯ ಸಿವಿಲ್ ನ್ಯಾಯಾಧೀಶ ಜೆ.ಯೋಗೀಶ್ , ಕಿರಿಯ ಶ್ರೇಣಿ ನ್ಯಾಯಾಧೀಶರಾದ ಎಚ್.ಜೆ. ಶಿಲ್ಪ ಇವರೊಂದಿಗೆ ಭಾನುವಾರ ಪಟ್ಟಣಕ್ಕೆ ಆಗಮಿಸಿ ತಾತ್ಕಾಲಿಕ ಕಟ್ಟಡದ ನವೀಕರಣ ಕಾರ್ಯ ವೀಕ್ಷಿಸಿ ನಂತರ ಅವರು  ಮಾತನಾಡಿ ಶೀಘ್ರದಲ್ಲಿಯೇ ನವೀಕರಣ ಕಾರ್ಯ ಪೂರ್ಣಗೊಳಿಸಿಕೊಟ್ಟರೆ ಪುನಃ ಜಿಲ್ಲಾ ನ್ಯಾಯಾಧೀಶರು ಕಟ್ಟಡವನ್ನು ಪರಿಶೀಲಿಸಿ ವರದಿ ಸಲ್ಲಿಸಿದ ನಂತರ ನ್ಯಾಯಾಲಯ ಆರಂಭಕ್ಕೆ ಅನುಮತಿ ನೀಡಲಾಗುವುದು ಎಂದರು. 
ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಪಟ್ಟಣದ ಹೊರವಲಯದಲ್ಲಿ ಕನಿಷ್ಠ ಐದಾರು ಎಕರೆ ಸರ್ಕಾರಿ ಭೂಮಿಯನ್ನು ಜಿಲ್ಲಾಡಳಿತದಿಂದ ಪಡೆದುಕೊಂಡರೆ ಸುಸಜ್ಜಿತ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಅನುಕೂಲವಾಗುತ್ತದೆ ಹಾಗಾಗಿ ಈ ನಿಟ್ಟಿನತ್ತ ವಕೀಲರು ಕಾರ್ಯೋನ್ಮುಖರಾಗುವಂತೆ ಸಲಹೆ ನೀಡಿದರು.
ಹೋರಾಟ ಸಮಿತಿ ಅಧ್ಯಕ್ಷ ಎಂ.ಗುರುಸಿದ್ಧನಗೌಡ ಮಾತನಾಡಿ ಕೊಟ್ಟೂರು ತಾಲ್ಲೂಕಿನ ಅತಿ ಹೆಚ್ಚು ಪ್ರಕರಣಗಳು ಕೂಡ್ಲಿಗಿ ನ್ಯಾಯಾಲಯದಲ್ಲಿ ದಾಖಲಾಗಿರುತ್ತವೆ ಹಾಗಾಗಿ ಕಕ್ಷಿದಾರರಿಗೆ ವಿಳಂಭವಾಗದಂತೆ ನ್ಯಾಯ ದೊರಕಿಸಿಕೊಡಲು ನ್ಯಾಯಾಲಯ ಸ್ಥಾಪನೆಯಿಂದ ಸಹಕಾರಿಯಾಗುತ್ತದೆ ಹಾಗೂ ಈ ಭಾಗದ ವಕೀಲರಿಗೂ ಸಹ ಅನುಕೂಲವಾಗುತ್ತದೆ ಎಂದು ನ್ಯಾಯಾಧೀಶರಲ್ಲಿ ಮನವರಿಕೆ ಮಾಡಿಕೊಟ್ಟರು.
ನ್ಯಾಯಾಲಯ ಹೋರಾಟ ಸಮಿತಿ ಉಪಾಧ್ಯಕ್ಷ ಪಿ.ಪ್ರಭುದೇವ್, ಕಾರ್ಯದರ್ಶಿ ಶಿವಾನಂದ ಬಾವಿಕಟ್ಟಿ, ಜಂಟಿ ಕಾರ್ಯದರ್ಶಿಗಳಾದ ಕೆ.ಗುರುಬಸವರಾಜ್, ಕಾಳಚಾರಿ ಬಿ , ಖಜಾಂಚಿ ಟಿ.ಎಂ.ಸೋಮಯ್ಯ ಹಾಗೂ ಸದಸ್ಯರು, ಕೂಡ್ಲಿಗಿ ವಕೀಲರ ಸಂಘದ ಅಧ್ಯಕ್ಷ ಹೊನ್ನೂರಪ್ಪ ಹಾಗೂ ಪದಾಧಿಕಾರಿಗಳು, ವಕೀಲರು ಪಾಲ್ಗೊಂಡಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ