Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಂಡಾತರ ಗರ್ಭೀಣಿ ಮಹಿಳೆಯರ ಮೇಲೆ ನಿಗಾವಹಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

 

ಬಳ್ಳಾರಿ,ಜ.3o
ಜಿಲ್ಲೆಯಲ್ಲಿನ ಗಂಡಾಂತರ  ಗರ್ಭೀಣಿ ಮಹಿಳೆಯರ ಮೇಲೆ ನಿರಂತರ ನಿಗಾ ವಹಿಸುವ ಮೂಲಕ ತಾಯಿ-ಶಿಶು ಮರಣ ಸಂಭಂವಿಸದಂತೆ ವೈದ್ಯಾಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ತಾಯಿ ಮತ್ತು ಶಿಶು ಮರಣ ತಡೆಗಟ್ಟುವಿಕೆ ಕುರಿತ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಂಡಾಂತರ ಗರ್ಭಿಣಿ ಮಹಿಳೆಯರಿಗೆ ರಕ್ತಹೀನತೆ, ಪೌಷ್ಠಿಕ ಆಹಾರದ ಕೊರತೆ, ಕಬ್ಬಿಣಾಂಶ ಮಾತ್ರೆಗಳ ಸೇವನೆ ಕುರಿತು ಆಶಾಕಾರ್ಯಕರ್ತೆಯರು ಮನೆ ಭೇಟಿ ಸಂದರ್ಭದಲ್ಲಿ ಸೂಚಿಸಬೇಕು. ರಕ್ತಹೀನತೆ ಉಂಟಾಗುವುದು ತಡೆಗಟ್ಟುವ ಮೂಲಕ ಜಿಲ್ಲೆಯಲ್ಲಿ ಸಹಜ ಹೆರಿಗೆಗೆಯೂ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ತಾಯಂದಿರ ಆರೈಕೆ ಕುರಿತು ಕುಟುಂಬದ ಸದಸ್ಯರಿಗೆ ತಿಳಿ ಹೇಳಬೇಕು. ಮುಖ್ಯವಾಗಿ ಚೊಚ್ಚಲು ಗರ್ಭಿಣಿ ಅವಧಿಯಲ್ಲಿ ವೈದ್ಯಕೀಯ ಕಾರಣಗಳಿಂದ ಗುರ್ತಿಸಲ್ಪಡುವ ಗಂಡಾಂತರ ಗರ್ಭಿಣಿ ಸಂದರ್ಭದಲ್ಲಿ ಹೆಚ್ಚಿನ ಕಾಳಜಿ ವಹಿಸಲು ಆದ್ಯತೆ ನೀಡಬೇಕು. ಮಗು ಜನನದ ಬಳಿಕ ತೂಕದ ಆಧಾರದ ಮೇಲೆಯೂ ಕಾಳಜಿ ವಹಿಸುವ ಮೂಲಕ ಜಾಗ್ರತೆ ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್.ಸಂಕನೂರು ಅವರು ಮಾತನಾಡಿ, ಹೆರಿಗೆಯಾದ ನಂತರವು ನಿಗಧಿತ ಕಾಲಾವಧಿಯೊಳಗೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದರೂ ಸಹ ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕೇವಲ ದಿನನಿತ್ಯದ ಔಷಧಿಗಳ ಶಿಫಾರಸ್ಸು ಮಾಡಬಾರದು ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಪ್ರತಿ ತಿಂಗಳು 9 ಮತ್ತು 24 ತಾರೀಖಿನಂದು ಆರೋಗ್ಯ ಕೇಂದ್ರಗಳಲ್ಲಿ ಗಭೀಣಿ ಮಹಿಳೆಯರಿಗಾಗಿಯೇ ನೀಡುವ ಊಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾಶಸ್ತ್ರಚಿಕಿತ್ಸೆ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ.ವಿ., ಬಿಮ್ಸ್ ತಜ್ಞರಾದ ಡಾ.ಚಂದ್ರಶೇಖರ್, ಡಾ.ಶ್ರೀಕಾಂತ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಸೇರಿದಂತೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ