Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸಿ:ಡಾ ಕುಮಾರ


ಸರ್ಕಾರದಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುವ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಸೂಚಿಸಿದರು.



ಇಂದು (ಮಾ.24) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಉದ್ಯೋಗಿನಿ, ಚೇತನ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ, ಹಾಗೂ ಧನಶ್ರೀ ಯೋಜನೆಗಳಲ್ಲಿ ಆರ್ಥಿಕ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಆಯ್ಕೆಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರು ಎಚ್.ಐ.ವಿ ಸೋಂಕಿತರು ಹಾಗೂ ದಮನಿತ ಮಹಿಳೆಯರಿಗೆ ತಲಾ 3 ರಂತೆ ಒಟ್ಟು 9 ಅರ್ಹ ಫಲಾನುಭವಿಗಳಿಗೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.



ಚೇತನ ಯೋಜನೆಯಡಿ ದಮನಿತ ಮಹಿಳೆಯರು ( ಲೈಂಗಿಕ ವೃತ್ತಿ ನಿರತ ಮಹಿಳೆಯರು) ಈಗಿರುವ ವೃತ್ತಿಯಿಂದ ಹೊರಬಂದು ಆರ್ಥಿಕ ಅಭಿವೃದ್ಧಿ ಹೊಂದಲು ಪ್ರೇರೆಪಿಸಲು ಜಿಲ್ಲೆಯಲ್ಲಿ 9 ಜನರಿಗೆ ತಲಾ ರೂ 30000-/- ಧನಸಹಾಯ ನೀಡಲು ಈ ಯೋಜನೆ ರೂಪಿಸಲಾಗಿದ್ದು 23 ಜನ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು,



ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಗೌರವಾನ್ವಿತ ಜೀವನ ನಡೆಸಲು ಹಾಗೂ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಭೌತಿಕವಾಗಿ ಜಿಲ್ಲೆಯಲ್ಲಿ 30 ಜನರಿಗೆ ತಲಾ ರೂ 30000-/- ಆರ್ಥಿಕ ಚಟುವಟಿಕೆ ನಡೆಸಿ ಅಭಿವೃದ್ಧಿ ಹೊಂದಲು ಈ ಯೋಜನೆ ಪ್ರೇರೇಪಿಸುತ್ತದೆ, ಈಗಾಗಲೇ 19 ಜನ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.



ಧನಶ್ರೀ ಯೋಜನೆಯಡಿ ಹೆಚ್. ಐ. ವಿ ಸೋಂಕಿತ ಮಹಿಳೆಯರು ಸ್ವ ಉದ್ಯೋಗ ಕೈಗೊಂಡು ಆರ್ಥಿಕ ಅಭಿವೃದ್ಧಿ ಕಾಣಲು ತಲಾ ರೂ 30000-/- ದಂತೆ 14 ಸೋಂಕಿತ ಮಹಿಳೆಯರಿಗೆ ಯೋಜನೆ ತಲುಪಿಸುವ ಭೌತಿಕ ಗುರಿ ಹೊಂದಲಾಗಿದೆ ಎಂದರು.



ಈ ಎಲ್ಲ ಯೋಜನೆಗಳು ಫಲಾನುಭವಿಗಳಿಗೆ ತಲುಪಿಯೂ ಅವರು ಆರ್ಥಿಕ ಅಭಿವೃದ್ಧಿ ಹೊಂದದಿದ್ದರೆ ಯೋಜನೆಗಳು ವಿಫಲವಾದಂತೆ, ಹಿಂದಿನ 3 ವರ್ಷಗಳಿಂದ ಯೋಜಯಡಿ ಪ್ರೋತ್ಸಾಹ ಧನ ಪಡೆದಿರುವವರು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂಬುದರ ಕುರಿತು ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದವರು.



ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಆರ್ ನಂದಿನಿ ಅವರು ಮಾತನಾಡಿ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹೆಚ್ಚಾಗಬೇಕು, ಸ್ಥಳೀಯವಾಗಿ ಯಾವ ವ್ಯಾಪಾರದಿಂದ ಆರ್ಥಿಕ ಸ್ಥಿರತೆ ಕಾಣಬಹುದು, ವೈಜ್ಞಾನಿಕವಾಗಿ ಹೇಗೆ ಉದ್ಯಮದಲ್ಲಿ ಯಶಸ್ಸು ಕಾಣಬಹುದು ಎಂಬುದರ ಕುರಿತು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಾರ್ಯಗಾರ ನಡೆಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.



ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು