Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡೆಂಗ್ಯೂ: ಮನೆ ಒಳಾಂಗಣದಲ್ಲಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸಿ


ಬಳ್ಳಾರಿ,ಜು.18



ಈಡಿಸ್ ಸೊಳ್ಳೆ ಉತ್ಪತ್ತಿಯಾಗುವ ಮನೆ ಒಳಗಿನ ಫ್ರಿಜ್, ಎರ್ಕೂಲರ್, ಅಲಂಕೃತ ಗಿಡಗಳ ಕುಂಡಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಡೆಂಗ್ಯು ಹರಡದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಈಡಿಸ್ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ಡೆಂಗ್ಯು ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲವಾದರೂ ಸಹ ಲಕ್ಷಣಗಳಾಧರಿಸಿ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಹೊರತಾಗಿ ಸಾರ್ವಜನಿಕರು ಮನೆಯ ಒಳಗೆ ಸೊಳ್ಳೆ ಉತ್ಪತ್ತಿಯಾಗುವಂತಹ ಫ್ರಿಜ್ನ ಹಿಂಭಾಗ, ಅಲಂಕೃತವಾಗಿ ಬಳಸುವ ಮನಿಪ್ಲಾಂಟ್ ಕುಂಡಗಳು (ಬಾಟಲ್), ಸ್ನಾನಗೃಹದಲ್ಲಿ ಮುಚ್ಚಳ ಮುಚ್ಚಲು ಸಾಧ್ಯವಿಲ್ಲದ ಸಿಮೆಂಟ್ ತೊಟ್ಟಿಗಳಲ್ಲಿ ವಾರಕ್ಕೊಮ್ಮೆ ನೀರು ಖಾಲಿ ಮಾಡಬೇಕು ಎಂದು ಹೇಳಿದ್ದಾರೆ.

ಶಿಕ್ಷಕರು ಶಾಲೆ, ಅಂಗನವಾಡಿಗಳಲ್ಲಿ ಪ್ರಾರ್ಥನೆ ವೇಳೆ ಮಕ್ಕಳಿಗೆ ತಮ್ಮ ಮನೆಯಲ್ಲಿ ನೀರು ಸಂಗ್ರಹಾರಕಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ನೀರು ತುಂಬಿದ ನಂತರ ಮುಚ್ಚಳ ಮುಚ್ಚುವಂತೆ ಪಾಲಕರ ಮನವೊಲಿಸಲು ತಿಳಿಸಬೇಕು. ಲಾರ್ವಾ ಪತ್ತೆ ಹಚ್ಚಿ ಮಾಹಿತಿ ತಿಳಿಸಿದ ವಿದ್ಯಾರ್ಥಿಗಳಿಗೆ ಎಲ್ಲರ ಸಮ್ಮುಖದಲ್ಲಿ ಪ್ರಶಂಸಿಸಬೇಕು ಎಂದು ಅವರು ಕೋರಿದ್ದಾರೆ.

ವಾರದಲ್ಲಿ ಒಂದು ದಿನ ಶುಕ್ರವಾರದಂದು ಡೆಂಗ್ಯು ರೋಗ ಹರಡುವ ಈಡಿಸ್ ಸೊಳ್ಳೆ ನಿರ್ಮೂಲನಾ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಂಬಲದೊಂದಿಗೆ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿಗಳ ಸಮನ್ವಯದೊಂದಿಗೆ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮ, ವಾರ್ಡ್ಗಳಿಗೆ ಸಿಬ್ಬಂದಿಯವರೊಂದಿಗೆ ಭೇಟಿ ನೀಡಿದಾದ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ