Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸೋದ್ಯಮ ಇಲಾಖೆ: ವಿವಿಧ ತರಬೇತಿಗೆ ಅರ್ಜಿ ಆಹ್ವಾನ



ಮಾ.16:

ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ ಅಡಿಯಲ್ಲಿ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

10ನೇ ತರಗತಿ ಉತ್ತೀರ್ಣರಾದವರಿಗೆ ಆಹಾರ ಮತ್ತು ಪಾನೀಯಗಳ ವಿತರಣೆ-4 ತಿಂಗಳು ತರಬೇತಿ, 5ನೇ ತರಗತಿ ಉತ್ತೀರ್ಣರಾದವರಿಗೆ ಕೊಠಡಿ ನಿರ್ವಹಣೆ-4 ತಿಂಗಳ ತರಬೇತಿ, 8ನೇ ತರಗತಿ ಉತ್ತೀರ್ಣರಾದವರಿಗೆ ವಿವಿಧ ಆಹಾರ ತಯಾರಕರಿಗೆ 5 ತಿಂಗಳ ತರಬೇತಿ ನೀಡಲಾಗುವುದು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಎಫ್.ಸಿ.ಐ (ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್) ಹಾಗೂ ಬೆಂಗಳೂರಿನ ಐಹೆಚ್ಎಂ (ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೆಂಟ್) ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 45 ವರ್ಷದೊಳಗಿರಬೇಕು. ತರಬೇತಿಯು 2026ರ ಮೇ 01 ರಂದು ಪ್ರಾರಂಭವಾಗುತ್ತಿರುವುದರಿಂದ ಅರ್ಜಿಯನ್ನು ಇದೇ ಮಾರ್ಚ್ 17 ರಿಂದ 30 ರವರೆಗೆ ಸಹಾಯಕ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ಕಚೇರಿಯಿಂದ ಅರ್ಜಿಗಳನ್ನು ವಿತರಿಸಲಾಗುವುದು. ಸೇವಾ ಸಿಂಧೂ ವೆಬ್ಸೈಟ್ sevasindhu.karnataka.gov.in/sevasindhu/English ನಲ್ಲಿಯೂ ಸಹ ಅರ್ಜಿಯನ್ನು ಸಲ್ಲಿಸಬಹುದು.

ತರಬೇತಿ ಪಡೆಯಲು ಆಸಕ್ತ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ಕಚೇರಿಗೆ ಸಲ್ಲಿಸಿ, ಮೂಲ ದಾಖಲೆಗಳನ್ನು ಕಚೇರಿಯ ಸಮಯದಲ್ಲಿ (ರಜೆ ದಿನಗಳನ್ನು) ಹೊರತುಪಡಿಸಿ ಪರಿಶೀಲಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಚಿತ್ರದುರ್ಗ ರವರ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08194-234466 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು