Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ: ಅರ್ಜಿ ಆಹ್ವಾನ


ಬಳ್ಳಾರಿ,ಮಾ.28



ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ತರಬೇತಿ ಜೊತೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಪಂಗಡದ ಇಂಜಿನಿಯರಿ0ಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಐಐಎಸ್‌ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ತರಬೇತಿ ನೀಡಲಾಗುತ್ತಿದ್ದು, ಒಟ್ಟು 200 ಇಂಜಿನೀಯರಿ0ಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದ್ದು, ರೂ.15000/- ಗಳ ಶಿಷ್ಯವೇತನ ಮತ್ತು ತರಬೇತಿ ನೀಡಲಾಗುತ್ತದೆ.

ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗಳಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇದೇ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಏ.11 ಕೊನೆಯ ದಿನ ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ