Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿ ಯೋಜನೆ ಪ್ರಗತಿಗೆ ಧರ್ಮಜ ಉತ್ತಪ್ಪ ಸೂಚನೆ

ಮಡಿಕೇರಿ ಜು.22-ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.


ಗ್ಯಾರಂಟಿ ಯೋಜನೆಗಳಿಂದ ಅರ್ಹರು ವಂಚಿತರಾಗದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿ ಆಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಉದ್ದೇಶ ಮತ್ತು ಆಶಯದಂತೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವಂತೆ ಸಲಹೆ ಮಾಡಿದರು.

ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಹೀಗೆ ಪಂಚ ಯೋಜನೆಗಳು ತಲುಪಿದಾಗ ಸರ್ಕಾರಕ್ಕೆ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಅವರು ಸಲಹೆ ಮಾಡಿದರು.

ಗ್ಯಾರಂಟಿ ಯೋಜನೆಗಳ ಕುಶಾಲನಗರ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ ಅವರು ಮಾತನಾಡಿ ಯುವನಿಧಿ ಯೋಜನೆಯಡಿ ಸಲ್ಲಿಕೆ ಆಗಿರುವ ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಭ ಮಾಡದೆ, ಕಾಲಮಿತಿಯಲ್ಲಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೇಕು ಎಂದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 1.30 ಲಕ್ಷ ಗುರಿಯಲ್ಲಿ 97,570 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹಣ ಪಾವತಿಯಾಗುತ್ತಿದ್ದು, ಶೇ.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಯುವನಿಧಿ ಯೋಜನೆಯು ಪ್ರತೀ ತಿಂಗಳು 3000 ಮತ್ತು 1500 ನಿರುದ್ಯೋಗಿ ಭತ್ಯೆ ನೀಡುವ ಯೋಜನೆಯಾಗಿದ್ದು, ಅರ್ಹರಿಗೆ ತಲುಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 562 ಮಂದಿಗೆ ಯೋಜನೆ ತಲುಪುತ್ತಿದೆ. ಒಟ್ಟಾರೆ ಇದುವರೆಗೆ 1030 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ರೇಖಾ ಗಣಪತಿ ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಅವರು ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿ ಜೂನ್ವರೆಗೆ ಹಣ ಪಾವತಿಯಾಗಿದ್ದು, ಜುಲೈ ತಿಂಗಳ ಹಣ ಪಾವತಿಗೆ ಬಾಕಿ ಇದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1,15,229 ಮಂದಿ ಹೆಸರು ನೋಂದಣಿಯಾಗಿದ್ದು, 1,14,056 ಮಂದಿ ಮಂಜೂರಾಗಿದ್ದು, ಶೇ.98.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ನಟರಾಜು ಅವರು ತಿಳಿಸಿದರು.

ಸೆಸ್ಕ್ ಎಇಇ ವಿನಯ್ ಕುಮಾರ್ ಅವರು ಕೊಡಗು ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 1,53,623 ಕುಟುಂಬಗಳಲ್ಲಿ 1,51,907 ಕುಟುಂಬಗಳು ನೋಂದಣಿಯಾಗಿದ್ದು, ಶೇ.98.88 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮೇ, ಅಂತ್ಯದವರೆಗೆ 5905.30 ಲಕ್ಷ ರೂ. ಸಹಾಯಧನ ಕಲ್ಪಿಸಲಾಗಿದೆ ಎಂದರು.

ಶಕ್ತಿ ಯೋಜನೆಯಡಿ ಆರಂಭದಿಂದ ಇದುವರೆಗೆ 62,04,618 ಮಂದಿ ಮಹಿಳೆಯರು ಪ್ರಯಾಣ ಮಾಡಿದ್ದು, 24.65 ಕೋಟಿ ರೂ. ಭರಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಮೋಹನ್ದಾಸ್(ಮಡಿಕೇರಿ), ಜಾನ್ಸನ್(ವಿರಾಜಪೇಟೆ) ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ