Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸದೃಢ ದೇಹ, ಮಾನಸಿಕತೆಗೆ ನಿತ್ಯ ಯೋಗ ಸಹಕಾರಿ. 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್.


ವಿಜಯನಗರ (ಹೊಸಪೇಟೆ), ಜೂ.21: ಆರೋಗ್ಯಕರ ಜೀವನ ಸಾಗಿಸಲು ಮತ್ತು ದೈಹಿಕವಾಗಿ ಸದೃಢವಾಗಲು ಯೋಗವು ಮುಖ್ಯ ಪಾತ್ರ ವಹಿಸಲಿದೆ. ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸಲಹೆ ನೀಡಿದರು.

ನಗರದ ಸ್ವಾತಂತ್ರ್ಯ ಉದ್ಯಾನವನ(ಫ್ರೀಡಂ ಪಾರ್ಕ್)ದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆಯುಷ್ ಇಲಾಖೆ, ಸ್ಕೌಟ್ಸ್ & ಗೈಡ್ಸ್ ಘಟಕ, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ, ಪತಂಜಲಿ ಯೋಗ ಸಂಸ್ಥೆ, ಎ.ಎಫ್.ಐ. ಮತ್ತು ವಿವಿಧ ಯೋಗ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು. ಈಗಿನ ಯುವ ಜನರಿಗೆ ಯೋಗದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ವೇದಕಾಲದಿಂದಲೂ ಯೋಗದ ಬಗ್ಗೆ ಭಾರತದಲ್ಲಿ ಕಲ್ಪನೆಯಿದೆ. ಬದಲಾದ ಜೀವನ ಶೈಲಿಯಿಂದಾಗಿ ಅಸಮತೋಲನ ಅಹಾರ ಪದ್ದತಿಗಳಿಂದ ಅನಾರೋಗ್ಯಪೀಡಿತರಾಗುತ್ತಿರುವುದು ಹೆಚ್ಚಾಗಿದೆ. ರೋಗಮುಕ್ತವಾಗಲು ಯೋಗವನ್ನು ರೂಢಿಸಿಕೊಳ್ಳಬೇಕಿದೆ. ಕೇವಲ ವಯ್ಸಸಾದ, ದಪ್ಪ ಮತ್ತು ಆರೋಗ್ಯ ಸಮಸ್ಯೆ ಇದ್ದವರು ಮಾತ್ರ ಯೋಗ ಮಾಡಬೇಕು ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕಿದೆ. ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಇದು ಸಹಕಾರಿಯಾಗಲಿದೆ. ಮಾನಸಿಕ ಒತ್ತಡ, ಖಿನ್ನತೆಯನ್ನು ಕಡಿಮೆ ಮಾಡಲು ಯೋಗವು ಪರಿಣಾಮಕಾರಿ ವಿಧಾನವಾಗಿದೆ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮತ್ತು ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ ಎಂದರು.

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಮಾತನಾಡಿ, ಯೋಗವನ್ನು ನಿಯಮಿತವಾಗಿ ಮಾಡುವುದರಿಂದ ರಕ್ತಪರಿಚಲನೆ, ಜೀರ್ಣಕ್ರಿಯೆ, ಉತ್ತಮ ನಿದ್ರೆಗೆ ಅನುಕೂಲವಾಗಲಿದೆ. ಭಾರತದಲ್ಲಿ ಆಯುರ್ವೇದದಲ್ಲಿ ಹೇಳಿರುವಂತೆ ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಮೂರರ ನಡುವಿನ ಸಮತೋಲನವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಇದರಿಂದ ನಮ್ಮ ದೇಹದ ಮೇಲೆ ನಿಯಂತ್ರಣ ಸಾಧಿಸಬಹುದಾಗಿದೆ ಎಂದರು.

ಹೊಸಪೇಟೆ ನಗರಸಭೆಯ ಅಧ್ಯಕ್ಷರಾದ ರೂಪೇಶ್ ಕುಮಾರ್ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ಉದ್ಯಾನವನ ಹಾಗೂ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಯೋಗಾಭ್ಯಾಸದ ಅನುಕೂಲತೆ ಮಾಡಿಕೊಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ಯೋಗ ಗುರುಗಳಾದ ಕಿರಣ್ ಜೀ ಮತ್ತು ರಾಜೇಶ್ ಕರ್ವಾ ವಿವಿಧ ಆಸನಗಳನ್ನು ಮಾಡಿಸಿದರು.

ಈ ವೇಳೆ ಪ್ರಭಾರಿ ಬಿಇಒ ಶೇಖರಪ್ಪ ಹೊರಪೇಟೆ, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಮುನಿವಾಸುದೇವರೆಡ್ಡಿ, ಡಾ.ಕೆ.ಹೆಚ್.ಗುರುಬಸವರಾಜ, ಡಾ.ಹೆಚ್.ಕೊಟ್ರಮ್ಮ, ಡಾ.ಸರಸ್ವತಿ, ಡಾ.ಹೇಮ, ಡಾ.ಹಾಲಮ್ಮ, ಆಕಾಶವಾಣಿಯ ನಾಗರತ್ನ, ಪತಂಜಲಿ ಯೋಗ ಸಂಸ್ಥೆಯ ಜಿಲ್ಲಾ ಉಸ್ತುವಾರಿ ಎಫ್.ಡಿ.ಹಳ್ಳಿಕೇರಿ, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಅಧ್ಯಕ್ಷರಾದ ಮಾನಸ, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ ಕಾರ್ಯಕ್ರಮದಲ್ಲಿ 1000ಕ್ಕೂ ಹೆಚ್ಚು ವಿವಿಧ ಶಾಲಾ ಕಾಲೇಜಿನ ಮಕ್ಕಳು, ವಿವಿಧ ಯೋಗ ಸಂಸ್ಥೆಗಳ ಯೋಗ ಪಟುಗಳು, ಆಯುಷ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು