Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೌಶಲ್ಯತೆ ಅಳವಡಿಸಿಕೊಂಡು ಯಶಸ್ವಿಯಾಗಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜ.03

ಉತ್ತಮ ಅಂಕಗಳ ಜೊತೆಗೆ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಗುಣಗಳನ್ನು ಅಳವಡಿಕೊಂಡು ಯಶಸ್ವಿಯಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಸರಳಾದೇವಿ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಉದ್ಯೋಗ ಮೇಳ 2025’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯೋಗ ಪಡೆದುಕೊಳ್ಳುವುದಷ್ಟೇ ಆಗದೆ ಈ ಭಾಗದಲ್ಲಿ ಉದ್ಯಮ ಸ್ಥಾಪನೆ ಮಾಡುವುದರ ಮೂಲಕ ಇತರರಿಗೂ ಉದ್ಯೋಗ ನೀಡುವಂತರಾಗಬೇಕು ಎಂದರು.
ಕ್ರಿಯಾಶೀಲ ಮನೋಭಾವ, ಸ್ಪರ್ಧಾತ್ಮಕ ಮನಸ್ಸು, ಸತತ ಪ್ರಯತ್ನದಿಂದ ಬದುಕು ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಬದುಕಿನಲ್ಲಿ ಉತ್ತಮ ಸಾಧಕರಾಗಲು ಕಠಿಣ ಪರಿಶ್ರಮ, ಸಂವಹನ ಕಲೆ, ಭಾಷೆಯ ಮೇಲೆ ಉತ್ತಮ ಹಿಡಿತ, ಸಾಧಿಸುವ ಛಲದಂತಹ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಅವಶ್ಯ ಎಂದರು.
ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಯಶವಂತ್ ರಾಜ್ ನಾಗಿರೆಡ್ಡಿ ಅವರು ಮಾತನಾಡಿ, ಇಂತಹ ಉದ್ಯೋಗ ಮೇಳಗಳು ಈ ಭಾಗದ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಕಾರಿಯಾಗುತ್ತವೆ. ನಮ್ಮ ವಾಣಿಜ್ಯೋದ್ಯಮ ಮಂಡಳಿಯು ಇಂತಹ ಚಟುವಟಿಕೆಗಳಿಗೆ ಸದಾ ಸಹಕರಿಸುತ್ತದೆ ಎಂದರು.
ಉದ್ಯೋಗ ಮೇಳದ ಬಗೆಗೆ ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್, ಈ ಮೇಳದಲ್ಲಿ 41 ಕಂಪನಿಗಳು ಭಾಗವಹಿಸಿವೆ. 1673 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮೋನಿಕಾ ರಂಜನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಹಟ್ಟಪ್ಪ, ಉದ್ಯೋಗ ಭರವಸೆ ಕೋಶದ ಸಂಚಾಲಕ ಕಲ್ಯಾಣ ಬಸವ, ಕೌಶಲ್ಯಾಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ್, ಜಿಲ್ಲಾ ಅಭಿಯಾನ ವ್ಯವಸ್ಥಾಪಕರಾದ ದೇವರಾಜ್, ಪ್ರಾಣೇಶ್, ಎಎಸ್‌ಒ ಚಂದ್ರಮ್ಮ ಹಾಗೂ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಪ್ರಹ್ಲಾದ್ ಚೌದ್ರಿ, ಡಾ.ಹೊನ್ನೂರಾಲಿ, ಡಾ.ಸೋಮನಾಥ, ಡಾ.ದಸ್ತಗೀರಸಾಬ್ ದಿನ್ನಿ, ಡಾ.ಚನ್ನ ಬಸವಯ್ಯ, ಡಾ.ಶ್ರೀನಿವಾಸ ರೆಡ್ಡಿ, ಪಂಪನಗೌಡ, ಡಾ.ಪಂಚಾಕ್ಷರಿ, ಡಾ.ಗುರುಬಸಪ್ಪ, ಡಾ.ದುರ್ಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
--------
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು