Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

ರಾಯಚೂರು,ಮೇ.28(ಕ.ವಾ):- ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ಕ್ಕೆ ಸಂಬAಧಿಸಿದAತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಮೇ.೨೮ರಂದು ನಗರದ ಎಸ್.ಆರ್.ಪಿ.ಎಸ್ ಪದವಿಪೂರ್ವ ಕಾಲೇಜಿನಲ್ಲಿರುವ ಭದ್ರತಾ ಕೊಠಡಿಗಳು ಹಾಗೂ ಮತಎಣಿಕೆ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೇ.೭ರಂದು ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆದಿದ್ದು, ಜೂ.೪ರಂದು ಮತೆಣಿಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತಎಣಿಕೆ ಕೆಂದ್ರಕ್ಕೆ ಭೇಟಿ ನೀಡಿದ ಅವರು, ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಾಗದಂತೆ ಸರಿಯಾದ ರೀತಿಯಲ್ಲಿ ನೀಡಿಕೊಳ್ಳಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮತ ಎಣಿಕೆ ಸಿಬ್ಬಂದಿ, ರಾಜಕೀಯ ಪಕ್ಷಗಳ ಏಜಂಟರುಗಳಿಗೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಗೆ ಸರಿಯಾದ ರೀತಿಯಲ್ಲಿ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಮತ ಎಣಿಕೆ ಕೇಂದ್ರದ ಸುತ್ತಲೂ ಸ್ವಚ್ಛತೆಯನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ನಂತರ ಮಾದ್ಯಮ ಕೊಠಡಿಗೆ ಭೇಟಿ ನೀಡಿ, ಮತ ಎಣಿಕೆ ವರದಿಗಾಗಿ ಬರುವ ಮಾದ್ಯಮದವರಿಗೆ ಸರಿಯಾದ ರೀತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಿಕೊಳ್ಳಬೇಕು. ಮತ್ತು ಮಾದ್ಯಮ ಕೊಠಡಿಯಲ್ಲಿ ಎಲ್.ಇ.ಡಿ ಪರದೆಗಳು ಹಾಗೂ ಅಂತರ್ಜಾಲದ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಮಾಡಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಎಸ್.ಎಸ್ ಸಂಪಗಾವಿ, ನಗರಸಭೆ ಪೌರಾಯುಕ್ತ ಜಿ.ಎನ್ ಚಲಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ