Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕಿತ್ಸಾ ವೆಚ್ಚ ಭರಿಸುವಂತೆ ಹೆಲ್ತ್ ಇನ್ಶುರೆನ್ಸ್ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗ ಆದೇಶ





ಬಳ್ಳಾರಿ,ಆ.21

ಹಣ ಪಾವತಿಸಿ ಆರೋಗ್ಯ ವಿಮೆ ಪಾಲಿಸಿ ಪಡೆದ ವ್ಯಕ್ತಿಯ ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸುವಂತೆ ಬೆಂಗಳೂರಿನ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಸೂರೆನ್ಸ್ ಕಂಪನಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಆದೇಶಿಸಿದೆ.

ಸಿರುಗುಪ್ಪ ತಾಲ್ಲೂಕಿನ ಮಣ್ಣೂರು ಪೋಸ್ಟ್ ಸೂಗೂರಿನ ತಿಲಕ್.ಎಸ್ ಎನ್ನುವವರು ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್, ಬೆಂಗಳೂರು ಇಲ್ಲಿ 2023 ರ ಸೆ.23 ರಿಂದ 2024 ರ ಸೆ.22 ರವರೆಗೆ ರೂ.55,495 ಗಳ ವಿಮಾ ಕಂತು ಪಾವತಿಸಿ ಆರೋಗ್ಯ ವಿಮೆ ಪಾಲಿಸಿ ಪಡೆದುಕೊಂಡಿದ್ದರು.

ಚಾಲ್ತಿಯ ಅವಧಿಯಲ್ಲಿ ಒಳರೋಗಿಯಾಗಿ ಕೊರನರಿ ಆರ್ಟರಿ ಕಾಯಿಲೆಗೆ ಆಂಜಿಯೋಪ್ಲಾಸ್ಟಿ ಮತ್ತು ಸ್ಟಂಟ್ ಅಳವಡಿಕೆ ಚಿಕಿತ್ಸೆ ಪಡೆದಿದ್ದು, ವೆಚ್ಚ ರೂ.4,05,476 ಭರಿಸಿದ್ದರು. ವೆಚ್ಚ ಪಾವತಿಸುವಂತೆ ಕಂಪನಿಗೆ ಕ್ಲೆoಮ್ ಅರ್ಜಿ ಸಲ್ಲಿಸದ್ದರು.

ವಿಮಾ ಕಂಪನಿಯು ದೂರುದಾರರು ಪಾಲಿಸಿ ನವೀಕರಣದ ಮುನ್ನ ಹಿಂದೆ ಸಿವಿಎ ಮತ್ತು ಸಿಓಪಿಡಿ (choronic obstructive pulmonary disease) ರೋಗಕ್ಕೆ ಚಿಕಿತ್ಸೆ ಪಡೆದಿರುವುದನ್ನು ಮುಚ್ಚಿಟ್ಟು ವಿಮಾ ಷರತ್ತನ್ನು ಉಲ್ಲಂಘನೆ ಮಾಡಿದ್ದಾರೆಂದು ಕ್ಲೆoಮ್ ನ್ನು ತಿರಸ್ಕರಿಸಿದ್ದರು.

ಆಯೋಗದ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ ಮತ್ತು ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ ಇವರು ಉಭಯ ಪಕ್ಷಗಾರರ ವಾದ ಪ್ರತಿವಾದ ಮತ್ತು ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ದೂರುದಾರರು ಪ್ರಸ್ತುತ ಪಾಲಿಸಿಯ ನವೀಕರಣದ ಮುನ್ನ ಸಿಓಪಿಡಿ ರೋಗಕ್ಕೆ ಚಿಕಿತ್ಸೆ ಪಡೆದಿರುವುದೆಂದು ಪ್ರಮಾಣ ಪತ್ರ ಸಲ್ಲಿಸಿದ್ದು, ಸಂಬoಧಿಸಿದ ವೈದ್ಯರ ಸಾಕ್ಷಿ ಹೇಳಿಕೆಯನ್ನು ದಾಖಲಿಸದಿರುವುದು, ಚಿಕಿತ್ಸೆ ಪಡೆದ ಬಗ್ಗೆ ಸಾಬೀತುಪಡಿಸದೇ ವಿಮಾ ಕಂಪನಿಯು ದೂರುದಾರರ ವೈದ್ಯಕೀಯ ಚಿಕಿತ್ಸೆ ವೆಚ್ಚ ಮೊತ್ತ ರೂ.4,05,476/-ಗಳನ್ನು ಪಾವತಿಸದೇ ಇರುವುದು ಸೇವಾ ನಿರ್ಲಕ್ಷö್ಯತನವಾಗಿದೆ ಎಂದು ಅಭಿಪ್ರಾಯಪಟ್ಟಿತು.

1 ರಿಂದ 3ರ ಎದುರುದಾರರ ವಿಮಾ ಕಂಪನಿಯು ದೂರುದಾರರಿಗೆ ವೈದ್ಯಕೀಯ ಚಿಕಿತ್ಸೆ ವೆಚ್ಚ ರೂ.4,05,476, ಸೇವಾ ನ್ಯೂನ್ಯತೆ ಹಾಗೂ ಮಾನಸಿಕ ಹಿಂಸೆಗೆ ಪರಿಹಾರ ರೂ.10,000 ದೊಂದಿಗೆ ರೂ.5,000 ಗಳ ಪ್ರಕರಣದ ವೆಚ್ಚ ಸೇರಿ 45 ದಿನಗಳ ಒಳಗೆ ಪಾವತಿಸಬೇಕು. ತಪ್ಪಿದಲ್ಲಿ ಚಿಕಿತ್ಸೆ ವೆಚ್ಚ ರೂ.4,05,476 ಗಳಿಗೆ ಶೇ.6 ರಷ್ಟು ಬಡ್ಡಿ ಮೊತ್ತ ಪಾವತಿಸಲು ಭಾದ್ಯಸ್ಥರಾಗಿರುತ್ತಾರೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗವು ಆದೇಶಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ