Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಗ್ಯಾರೆಂಟಿ ಪ್ರಾಧಿಕಾರ ಸಭೆ

ಧಾರವಾಡ () ಡಿಸೆಂಬರ 06: ಜಿಲ್ಲಾ ಗ್ಯಾರಂಟಿ ಯೋಜನೆಗಳಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ಜರುಗಿತು.

ಗ್ಯಾರಂಟಿ ಯೋಜನೆಯ ಬಗ್ಗೆ ಅಧಿಕಾರಿಗಳು ಗಮಹರಿಸಿ, ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಬೇಕು. ಕೆಲವು ಭಾಗಗಳಲ್ಲಿ ಗ್ಯಾರಂಟಿ ಯೋಜನೆ ಸರಿಯಾಗಿ ತಲುಪದಿರುವ ಬಗೆಗೆ ದೂರುಗಳು ಬಂದಿದ್ದು, ಅಂತಹ ದೂರುಗಳನ್ನು ಪರಿಶೀಲಿಸಬೇಕೆಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ. ಅವರು ಮಾತನಾಡಿ, ಹಳ್ಳಿಯಲ್ಲಿ ಕೆಲಸ ಮಾಡುವಂತ ಶಿಕ್ಷಕಿಯರಿಗೆ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಬಸ್ ನಿಲ್ದಾಣದಲ್ಲಿ ಮಹಿಳೆಯರಿದ್ದರೂ ಬಸ್ ನಿಲುಗಡೆ ಮಾಡದಿರುವಂತ ದೂರುಗಳು ಬರುತ್ತಿದ್ದು, ಅಧಿಕಾರಿಗಳು ಅದನ್ನು ಗಮನಿಸಿ ಸರಿಯಾದ ಕ್ರಮ ಜರುಗಿಸಬೇಕು.

ಯುವನಿಧಿ ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ಮಾಡಿ, ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು. ಡಿಜಿಟಲ್ ಮಾಧ್ಯಮದ ಬಳಕೆ ಹೆಚ್ಚಾಗಿರುವುದರಿಂದ ಯುವನಿಧಿ ಯೋಜನೆಯ ಬಗ್ಗೆ ಡಿಜಿಟಲ್ ಮಾಧ್ಯಮಗಳಲ್ಲಿ ಹೆಚ್ಚಾಗಿ ಪ್ರಚಾರ ಮಾಡಿ ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಮುರಗಯ್ಯಾ ವಿರಕ್ತಮಠ, ಅಬ್ದುಲ್ ರಶೀದ ಬೋಳಾಬಾಹಿ ಹಾಗೂ ರತ್ನಾ ತೇಗೂರಮಠ ಅವರು ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳಅನುಷ್ಠಾನ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.

****

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ